Webdunia - Bharat's app for daily news and videos

Install App

ನಿಖಿಲ್​ಗೆ ಕರೆ ಮಾಡಿ ಡಿಕೆಶಿ ಸಾಂತ್ವನ

Webdunia
ಸೋಮವಾರ, 15 ಮೇ 2023 (20:13 IST)
ಜೆಡಿಎಸ್​​ ಯುವ ನಾಯಕ ನಿಖಿಲ್ ಕುಮಾರಸ್ವಾಮಿಗೆ ಫೋನ್ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಾಂತ್ವನ ಹೇಳಿದ್ದಾರೆ. ರಾಮನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ ವಿರುದ್ದ ಜೆಡಿಎಸ್​ ಅಭ್ಯರ್ಥಿ ನಿಖಿಲ್​ ಕುಮಾರಸ್ವಾಮಿ ಸೋಲನ್ನು ಅನುಭವಿಸಿದ್ದರು. ನಿಖಿಲ್​ ಕುಮಾರ್​ ಸ್ವಾಮಿಗೆ ಫೋನ್ ಮುಖಾಂತರ ಡಿ.ಕೆ ಶಿವಕುಮಾರ್ ಸಾಂತ್ವನ ಹೇಳಿದ್ದಾರೆ. ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸೋಲು ಅನುಭವಿಸಿದ್ದರು.. ಈಗ ಮತ್ತೆ ವಿಧಾನಸಭಾ ಚುನಾವಣೆಯಲ್ಲೂ ನಿಖಿಲ್ ಕುಮಾರಸ್ವಾಮಿ ಸೋಲು ಅನುಭವಿಸುವಂತಾಯಿತು. ಸತತ ಸೋಲಿನಿಂದ ಕಂಗೆಟ್ಟಿರುವ ನಿಖಿಲ್​ಗೆ ಡಿ.ಕೆ ಶಿವಕುಮಾರ್​ ನಿನಗೆ ರಾಜಕೀಯ ಕುಟುಂಬದ ಹಿನ್ನೆಲೆ ಇದೆ. ನನಗೆ ಯಾವುದೇ ರಾಜಕೀಯ ಹಿನ್ನೆಲೆ ಇಲ್ಲದೇ ಇಷ್ಟು ಮಟ್ಟಕ್ಕೆ ಬೆಳೆದಿದ್ದೇನೆ. ಈ ಸೋಲಿನಿಂದ ಕಂಗೆಡಬೇಡ, ಕ್ಷೇತ್ರದಲ್ಲಿ ಓಡಾಟ ನಡೆಸಿ ಜನರ ಜೊತೆ ನಿಲ್ಲಬೇಕು ಎಂದು ಹೇಳಿದ್ರು.. ರಾಜಕೀಯದಲ್ಲಿ ಏಳು- ಬೀಳು ಸಹಜ.. ಸೋಲಿನಿಂದ ಹತಾಶನಾಗಬೇಡ, ಮುಂದಿನ ದಿನಗಳಲ್ಲಿ‌ ನಿನಗೆ ರಾಜಕೀಯದಲ್ಲಿ ಭವಿಷ್ಯ ಇದೆ ಎಂದು ನಿಖಿಲ್ ಕುಮಾರಸ್ವಾಮಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾರೈಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

70 ಲಕ್ಷ ಕಾರು, ಚಿನ್ನ ಕೊಟ್ಟರೂ ಗಂಡನ ಮನೆಯವರ ಕಾಟ ತಪ್ಪಲಿಲ್ಲ: ನವವಿವಾಹಿತೆ ಆತ್ಮಹತ್ಯೆ

ಮುಕ್ಕಾಲು ಕೆಜಿ ಚಿನ್ನ, ಐಷಾರಾಮಿ ಕಾರು ನೀಡಿದ ಬಳಿಕವೂ ವರದಕ್ಷಿಣೆ ಕಿರುಕುಳ: ನವವಿವಾಹಿತೆ ಸಾವಿಗೆ ಶರಣು

ಲಲಿತ್ ಮೋದಿಗೆ ಸುಪ್ರೀಂಕೋರ್ಟ್ ಶಾಕ್‌: ಬಿಸಿಸಿಐಗೆ ನಿರ್ದೇಶನ ನೀಡಲು ಕೋರಿದ್ದ ಅರ್ಜಿ ವಜಾ

ದಲಿತರ ಜಮೀನನ್ನು ಅರಣ್ಯ ಇಲಾಖೆ ವಶಪಡಿಸಿಕೊಳ್ಳಲು ಹೊರಟಿದೆ: ಛಲವಾದಿ ನಾರಾಯಣಸ್ವಾಮಿ

ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: ಕನಿಷ್ಠ ಹತ್ತ ಕಾರ್ಮಿಕರು ಸಜೀವ ದಹನ, ಹಲವರಿಗೆ ಗಾಯ

ಮುಂದಿನ ಸುದ್ದಿ
Show comments