Webdunia - Bharat's app for daily news and videos

Install App

ಅತೀ ಭ್ರಷ್ಟರಲ್ಲಿ ಡಿಕೆಶಿವಕುಮಾರ್ ಉನ್ನತ ಸ್ಥಾನ ಹೊಂದಿದ್ದಾರೆ; ಆರೋಪ

Webdunia
ಶನಿವಾರ, 16 ಮಾರ್ಚ್ 2019 (13:17 IST)
ಸಚಿವ ಡಿ.ಕೆ.ಶಿವಕುಮಾರ್ ಈ ದೇಶಕಂಡ ಅತೀ ಹೆಚ್ಚು ಭ್ರಷ್ಟರಲ್ಲಿ ಉನ್ನತ ಸ್ಥಾನ ಹೊಂದಿದ್ದಾರೆ. ಹೀಗಂತ ಆರೋಪ ಕೇಳಿಬಂದಿದೆ.

ಗಣಿ ಭಾದಿತ ಜನರ ಮೂಲ ಸೌಕರ್ಯ, ಶಿಕ್ಷಣ, ಅಭಿವೃದ್ಧಿಗಾಗಿ ಮೀಸಲಿಟ್ಟಿರುವ 15 ಸಾವಿರ ಕೋಟಿ ಹಣವನ್ನು ಲೂಟಿ ಮಾಡಲು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನದ ಹೊಣೆ ಹೊತ್ತ ಡಿ.ಕೆ.ಶಿವಕುಮಾರ್ ರವರನ್ನು ಸಚಿವ ಸ್ಥಾನದಿಂದ ಕೈ ಬಿಡಬೇಕೆಂದು ಸಮಾಜ ಪರಿವರ್ತನಾ ಸಮುದಾಯದ ಮುಖಂಡ ಎಸ್.ಆರ್.ಹಿರೇಮಠ ಆಗ್ರಹಿಸಿದ್ದಾರೆ.

ಬಳ್ಳಾರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್.ಅರ್.ಹಿರೇಮಠ, ದೇಶಕಂಡ ಅತೀ ಹೆಚ್ಚು ಭ್ರಷ್ಟರಲ್ಲಿ ಡಿ.ಕೆ.ಶಿ ಕೂಡ ಉನ್ನತ ಸ್ಥಾನ ಹೊಂದಿದ್ದಾರೆ. ಈ ಬಗ್ಗೆ ನಾವು ಈ ಹಿಂದೆ ನ್ಯಾಯಾಲಯದ ಮೊರೆ ಹೋಗಿದ್ದ ಹಿನ್ನಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ರ  ಅಳಿಯ ಸಿದ್ಧಾರ್ಥ ಹಾಗೂ ಡಿ.ಕೆ.ಶಿ ವಿರುದ್ಧ ಪ್ರಕರಣಗಳು ದಾಖಲಾಗಿ ಸಾಬೀತಾಗಿ ಆಸ್ತಿಯನ್ನು ಮುಟ್ಟುಗೋಲು ಹಾಕಲಾಗಿದೆ. ಇದು ಸ್ವಾಗತಾರ್ಹವಾಗಿದೆ ಎಂದರು.

ಗಣಿ ಭಾದಿತರ ಜನರ ಹಣವನ್ನು ಕೊಳ್ಳೆ ಹೊಡೆಯಲು ಬಳ್ಳಾರಿಗೆ ಅಗಮಿಸಿದ ಡಿ.ಕೆ.ಶಿ ಯ ಬಗ್ಗೆ ಸರ್ಕಾರದ ಮೇಲೆ ಒತ್ತಡ ಹಾಕುವ ಮೂಲಕ ಸಂಪುಟ ಸ್ಥಾನದಿಂದ ಕೈ ಬಿಡಬೇಕು. ಗಣಿ ಬಾಧಿತರ ಹಣದ ಬಗ್ಗೆ ಪೈಸಾ ಟು ಪೈಸಾ   ಲೆಕ್ಕ ಕೇಳುವಲ್ಲಿ ಇಲ್ಲಿನ ಜನರು, ಸಂಘಟನೆಗಳು ಮುಂದಾಗಬೇಕು ಎಂದರು.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಗಾಜಿಯಾಬಾದ್‌: ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದ ಮಹಿಳೆಗೆ ಅಟ್ಟಾಡಿಸಿ ಹೊಡದ ವ್ಯಕ್ತಿ, Viral Video

ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕದ ಟ್ಯಾಕ್ಸಿ ಚಾಲಕರಿಗೆ ಹೊಸ ಭರವಸೆ

ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ: ವಿಜಯೇಂದ್ರ

ಮುಂದಿನ ಸುದ್ದಿ
Show comments