Webdunia - Bharat's app for daily news and videos

Install App

ಜಾರಿ ನಿರ್ದೇಶನಾಲಯದಿಂದ ಕರೆ ಬಂದಿದ್ದು ನಿಜ: ಡಿ.ಕೆ. ಶಿವಕುಮಾರ್

Webdunia
ಬುಧವಾರ, 13 ಸೆಪ್ಟಂಬರ್ 2017 (14:14 IST)
ಜಾರಿ ನಿರ್ದೇಶನಾಲಯದಿಂದ ಕರೆ ಬಂದಿದ್ದು ನಿಜ ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಕರೆ ಮಾಡಿ ನೋಟಿಸ್ ಕಳುಹಿಸುವುದಕ್ಕೆ ಅಡ್ರೆಸ್ ಬೇಕು ಎಂದು ಕೇಳಿದರು. ಆಯ್ತು ಕಳುಹಿಸಿ ಎಂದು ತಿಳಿಸಿರುವುದಾಗಿ ಹೇಳಿದ್ದೇನೆ ಎಂದು ಹೇಳಿದ್ದಾರೆ.

ನಿನ್ನೆ ನನಗೆ ಜಾರಿ ನಿರ್ದೇಶನಾಲಯದಿಂದ ಕರೆ ಬಂದಿದ್ದು ನಿಜ. ಕ್ರಾಸ್ ಚೆಕ್ ಮಾಡಿದಾಗ ಇಡಿ ಕಚೇರಿ ಎಂದು ತಿಳಿದುಬಂದಿದೆ. ಈ ಬಗ್ಗೆ ಪರಿಶೀಲನೆ ನಡೆಸುವುದಕ್ಕೆ ನನ್ನ ತಮ್ಮ ಸಂಸದ ಡಿ.ಕೆ. ಸುರೇಶ್`ಗೆ ಮಾಹಿತಿ ನೀಡಿದ್ದೇನೆ. ಪರಿಶೀಲನೆ ಮಾಡಿದ್ದಾರೋ ಇಲ್ಲವೋ ಗೊತ್ತಿಲ್ಲ. ಈ ವಿಷಯವನ್ನ ಬಹಿರಂಗಪಡಿಸುವುದು ಬೇಡವೆಂದು ಸುಮ್ಮನಿದ್ದೆ. ನಿನ್ನೆ ಪತ್ರಕರ್ತರೊಬ್ಬರು ಕರೆ ಮಾಡಿ ಕೇಳಿದರು ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಡಿ.ಕೆ. ಶಿವಕುಮಾರ್ ಮನೆ ಮೇಲಿನ ಐಟಿ ದಾಳಿ ಬಳಿಕ ಪ್ರಕರಣ ಜಾರಿ ನಿರ್ದೇಶನಾಲಯಕ್ಕೆ ವರ್ಗಾವಣೆಯಾಗುವ ಬಗ್ಗೆ ವರದಿಗಳು ಕೇಳಿ ಬಂದಿದ್ದವು. ಇದೀಗ, ಜಾರಿ ನಿರ್ದೇಶನಾಲಯದಿಂದ ಡಿಕೆಶಿ ಅವರಿಗೆ ನೋಟಿಸ್ ನೀಡಲು ಕರೆ ಬಂದಿರುವುದು ಸಚಿವರಿಗೆ ಹೊಸ ಸಂಕಷ್ಟ ಉಂಟು ಮಾಡುತ್ತಾ ಎಂಬ ಪ್ರಶ್ನೆ ಎದ್ದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments