Webdunia - Bharat's app for daily news and videos

Install App

ಅಹ್ಮದ್ ಪಟೇಲ್ ಗೆಲುವಿನ ಕ್ರೆಡಿಟ್ ನಾನು ಅಪೇಕ್ಷಿಸುವುದಿಲ್ಲ: ಡಿ.ಕೆ. ಶಿವಕುಮಾರ್

Webdunia
ಬುಧವಾರ, 9 ಆಗಸ್ಟ್ 2017 (11:21 IST)
ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಹ್ಮದ್ ಪಟೇಲ್ ಗೆಲುವಿನ ಬಗ್ಗೆ ಸಂತಸ ವ್ಯಕ್ತಪಡಿಸಿರ ಸಚಿವ ಡಿ.ಕೆ. ಶಿವಕುಮಾರ್, ಪಕ್ಷ ನೀಡಿದ್ದ ಜವಾಬ್ದಾರಿಯನ್ನ ನಿರ್ವಹಿಸಿದ್ದೇನೆ. ನನಗೆ ಗೆಲುವಿನ ಕ್ರೆಡಿಟ್ ಬೇಡ ಎಂದಿದ್ದಾರೆ.

ನಮ್ಮ ಅಭ್ಯರ್ಥಿ ಅಹ್ಮದ್ ಪಟೇಲ್ ಗೆಲ್ಲುವಷ್ಟು ಶಾಸಕರ ಬೆಂಬಲವಿತ್ತು. ಆದರೂ ಬಿಜೆಪಿಯಿಂದ ಆಫರೇಶನ್ ಕಮಲದ ಯತ್ನ ನಡೆದಿತ್ತು. ಹೀಗಾಗಿ, ಅನಿವಾರ್ಯವಾಗಿ ನಮ್ಮ ಶಾಸಕರನ್ನ ಗುಜರಾತ್`ನಿಂದ ರಾಜ್ಯಕ್ಕೆ ಕರೆತರಬೇಕಾಯ್ತು. ನಮ್ಮ ನಾಯಕರು ಇದೀಗ ಗೆಲುವು ಸಾಧಿಸಿದ್ದಾರೆ.  ಒಬ್ಬ ಶಾಸಕರು ಅಡ್ಡ ಮತದಾನ ಮಾಡಿದ್ದಾರೆಂದು ತಿಳಿದು ಬಂದಿದೆ. ಪಕ್ಷ ನೀಡಿದ್ದ ಜವಾಬ್ದಾರಿಯನ್ನಷ್ಟೇ ನಾನು ನಿರ್ವಹಿಸಿದ್ದೇನೆ ಎಂದರು.

ಇದೇವೇಳೆ, ಚುನಾವಣಾ ಆಯೋಗಕ್ಕೆ ಅಭಿನಂದನೆ ಸಲ್ಲಿಸಿದ ಡಿ.ಕೆ. ಶಿವಕುಮಾರ್, ಅನ್ಯಾಯದ ಮಾರ್ಗದಿಂದ ನಡೆದರೆ ಯಾರಿಗೂ ಒಳ್ಳೆಯದಾಗುವುದಿಲ್ಲ. ಎಲ್ಲ ಪಕ್ಷಗಳಿಗೂ ಚುನಾವಣಾ ಆಯೋಗ ಪಾಠ ಕಲಿಸಿದೆ. ಮತದಾನದ ಗೌಪ್ಯತೆ ಕಾಪಾಡುವುದು ಬಹು ಮುಖ್ಯ ಎಂದು ಪಾಠ ಹೇಳಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments