Select Your Language

Notifications

webdunia
webdunia
webdunia
webdunia

ಡಿಕೆಶಿ ಆಡಳಿತಕ್ಕೆ ಶತಕದ ಸಂಭ್ರಮ: ರಾಜ್ಯದ ಅವೃದ್ಧಿಗೆ ಮೂರು ಮಹಾ ಸಂಕಲ್ಪ ಘೋಷಿಸಿದ ಸಿಎಂ ಶಿವಕುಮಾರ್‌

Government of Karnataka, Deputy Chief Minister D.K. Shivakumar, Guarantee Scheme
Photo Courtesy X
ಬೆಂಗಳೂರು: ಕರ್ನಾಟಕ ಸರ್ಕಾರದ ಆಡಳಿತ ಹಾಗೂ ಪಕ್ಷದ ಸಂಘಟನೆಯ 100 ದಿನಗಳ ಪೂರೈಕೆಯ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬಲಿಷ್ಠ ಕರ್ನಾಟಕ ನಿರ್ಮಾಣಕ್ಕಾಗಿ 3 ಮಹಾ ಸಂಕಲ್ಪ ಹಾಗೂ 9 ಪ್ರಮುಖ ಸಂಕಲ್ಪಗಳನ್ನು ಪ್ರಕಟಿಸಿದ್ದಾರೆ.

ಮಹಾ ಮೂರು ಸಂಕಲ್ಪಗಳು ಹೀಗಿದೆ. ರಾಜ್ಯದ ಸರ್ವತೋಮುಖ ಅಭಿವೃದ್ಧಿ, ಮೂಲಸೌಕರ್ಯ ವೃದ್ಧಿ ಮತ್ತು ಜಾಗತಿಕ ಮಟ್ಟದಲ್ಲಿ ಕರ್ನಾಟಕದ ಸ್ಥಾನಮಾನವನ್ನು ಎತ್ತಿಹಿಡಿಯುವುದು. ಸಂವಿಧಾನದ ಮೌಲ್ಯಗಳನ್ನು ರಕ್ಷಿಸಿ, ಎಲ್ಲಾ ಸಮುದಾಯಗಳ ನಡುವೆ ಶಾಂತಿ, ಬಾಂಧವ್ಯ ಹಾಗೂ ಸಮಾನ ಅವಕಾಶಗಳನ್ನು ಖಚಿತಪಡಿಸುವುದು. ಭ್ರಷ್ಟಾಚಾರ ರಹಿತ, ಹೊಣೆಗಾರಿಕೆಯುಳ್ಳ ಆಡಳಿತದ ಮೂಲಕ ಸರ್ಕಾರದ ಪ್ರತಿಯೊಂದು ಯೋಜನೆಯನ್ನು ಸಾರ್ವಜನಿಕರಿಗೆ ನೇರವಾಗಿ ತಲುಪಿಸುವುದು ಎಂದು ಶಿವಕುಮಾರ್‌ ಹೇಳಿದ್ದಾರೆ.

ಇದರ ಜೊತೆಗೆ 9 ಸಂಕಲ್ಪಗಳೂ ಮಾಡಿದೆ. ಸರ್ಕಾರದ ಐದೂ ಗ್ಯಾರಂಟಿ ಯೋಜನೆಗಳು ಕೊನೆಯ ಹಂತದ ಅರ್ಹ ಫಲಾನುಭವಿಗೂ ತಲುಪುವಂತೆ ಮಾಡುವುದು. ರಾಜಧಾನಿ ಬೆಂಗಳೂರಿನ ಸಂಚಾರ ದಟ್ಟಣೆ ನಿಯಂತ್ರಣ, ತ್ಯಾಜ್ಯ ನಿರ್ವಹಣೆ ಮತ್ತು ಮೂಲಸೌಕರ್ಯಗಳನ್ನು ಜಾಗತಿಕ ಮಟ್ಟಕ್ಕೆ ಏರಿಸುವುದು.  ಮೇಕೆದಾಟು, ಮಹಾದಾಯಿ ಹಾಗೂ ಕೃಷ್ಣಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ನೀರಾವರಿ ಯೋಜನೆಗಳಿಗೆ ವೇಗ ನೀಡಲಾಗುವುದ ಎಂದು ತಿಳಿಸಿದ್ದಾರೆ.

ಯುವನಿಧಿ ಯೋಜನೆಯ ಜೊತೆಗೆ ಹೊಸ ಉದ್ಯೋಗಾವಕಾಶಗಳ ಸೃಷ್ಟಿ ಮತ್ತು ಕೌಶಲ್ಯಾಭಿವೃದ್ಧಿಗೆ ಹೆಚ್ಚಿನ ಆದ್ಯತೆ. ಗೃಹಲಕ್ಷ್ಮಿ ಮತ್ತು ಶಕ್ತಿ ಯೋಜನೆಗಳ ಮೂಲಕ ಮಹಿಳೆಯರ ಆರ್ಥಿಕ ಸ್ವಾವಲಂಬನೆ ಹಾಗೂ ಗೌರವವನ್ನು ಹೆಚ್ಚಿಸುವುದು. ಕೃಷಿ ಕ್ಷೇತ್ರಕ್ಕೆ ಪ್ರೋತ್ಸಾಹ, ಬೆಂಬಲ ಬೆಲೆ ಹಾಗೂ ಗ್ರಾಮೀಣ ಆರ್ಥಿಕತೆಗೆ ಬಲ ತುಂಬುವ ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗುವುದು ಎಂದರು.

‌ಸರ್ಕಾರಿ ಶಾಲೆ-ಕಾಲೇಜುಗಳು ಹಾಗೂ ಆಸ್ಪತ್ರೆಗಳ ಸುಧಾರಣೆ ಮಾಡಿ ಬಡವರಿಗೆ ಉಚಿತ ಮತ್ತು ಉತ್ತಮ ಸೇವೆ ನೀಡುವುದು. ಬೆಂಗಳೂರು ಮಾತ್ರವಲ್ಲದೆ 2ನೇ ಮತ್ತು 3ನೇ ಹಂತದ ನಗರಗಳಿಗೂ ಹೂಡಿಕೆ ಆಕರ್ಷಿಸಿ ಕೈಗಾರಿಕೆಗಳನ್ನು ವಿಸ್ತರಿಸುವುದು. ಬೂತ್ ಮಟ್ಟದಿಂದ ಪಕ್ಷದ ಸಂಘಟನೆ ಬಲಪಡಿಸಿ, ಶ್ರಮಿಸಿದ ಕಾರ್ಯಕರ್ತರಿಗೆ ಸೂಕ್ತ ಅಧಿಕಾರ ಮತ್ತು ಗೌರವ ನೀಡುವುದು ಎಂದು ಶಿವಕುಮಾರ್‌ ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಗಲ್ವಾನ್ ಸಂಘರ್ಷದ ಬಳಿಕ ಮೊದಲ ಬಾರಿ ಭಾರತಕ್ಕೆ ಚೀನಾ ಅಧ್ಯಕ್ಷ: ಗರಿಗೆದರಿದ ದ್ವಿಪಕ್ಷೀಯ ಮಾತುಕತೆ