ಸಂಚಾರಿ ನಿಯಮ ಉಲ್ಲಂಘನೆ ಮಾಡಿದ್ರೆ ಡಿಎಲ್ ರದ್ದು : ಅಲೋಕ್ ಕುಮಾರ್

Webdunia
ಬುಧವಾರ, 28 ಜೂನ್ 2023 (07:17 IST)
ರಾಮನಗರ : ಯಾರಾದರೂ ಸಂಚಾರಿ ನಿಯಮ ಉಲ್ಲಂಘನೆ ಮಾಡಿದರೆ ಡಿಎಲ್ ರದ್ದು ಮಾಡುತ್ತೇವೆ.  ಡ್ರೈವಿಂಗ್ ವೇಳೆ ಮೊಬೈಲ್ ಬಳಕೆ, ಮದ್ಯಪಾನ ಮಾಡಿ ವಾಹನ ಚಲಾಯಿಸಿದರೆ ಹಾಗೂ ಮಿತಿ ಮೀರಿ ವಾಹನ ಚಾಲನೆ ಮಾಡಿದರೆ ಕೇಸ್ ಹಾಕುವ ಕೆಲಸ ಮಾಡುತ್ತೇವೆ ಎಂದು ಸಂಚಾರಿ ಮತ್ತು ರಸ್ತೆ ಸುರಕ್ಷತಾ ಎಡಿಜಿಪಿ ಅಲೋಕ್ ಕುಮಾರ್ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.
 
ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನಲೆ ಇಂದು ಎನ್ಹೆಚ್ ಅಧಿಕಾರಿಗಳ ಜೊತೆ ಅಲೋಕ್ ಕುಮಾರ್ ಹೆದ್ದಾರಿಯ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಈ ರಸ್ತೆಯಲ್ಲಿ ಬಹಳ ಬಾರಿ ಸಂಚರಿಸಿದ್ದೇನೆ. ಕಳೆದ ಐದಾರು ತಿಂಗಳಿನಿಂದ ರಾಮನಗರ ವ್ಯಾಪ್ತಿಯಲ್ಲಿ 58ಕ್ಕೂ ಹೆಚ್ಚು ಜನ ಮೃತ ಪಟ್ಟಿದ್ದಾರೆ. 48ಕ್ಕೂ ಹೆಚ್ಚು ಅಪಘಾತಗಳಾಗಿವೆ.

ಎಲ್ಲೆಲ್ಲಿ ಅಪಘಾತ ನಡೆದಿದೆ ಆ ಸ್ಥಳಗಳ ಸಮಸ್ಯೆ ಬಗ್ಗೆ ಪರಿಶೀಲಿಸಿದ್ದೆವೆ. ಹೆದ್ದಾರಿಯಲ್ಲಿ ಆಗಮನ ಮತ್ತು ನಿರ್ಗಮನದ ಸಮಸ್ಯೆ ಇದೆ. ಕೆಲವೆಡೆ ರಸ್ತೆಯಲ್ಲಿ ತೀವ್ರ ತಿರುವುಗಳಿವೆ. ಇದರಿಂದ ವಾಹನಗಳು ಡಿವೈಡರ್ ಹಾರುತ್ತಿವೆ. ಹೈವೆಯಲ್ಲಿ ಲೇನ್ ಶಿಸ್ತನ್ನು ಬಳಸಬೇಕು. ಹೀಗಾಗಿ ಹೈವೇ ಪಟ್ರೋಲಿಂಗ್ ಅಗತ್ಯ ಇದೆ ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳನ್ನು ಟಾರ್ಗೆಟ್ ಮಾಡಲಾಗಿದೆ: ಡಿಸಿಎಂ ಪವನ್ ಕಲ್ಯಾಣ್

ರಾಜ್ಯದಲ್ಲಿರುವ ಡ್ರಗ್ಸ್‌ ದಂಧೆ ವಿರುದ್ಧ ಕಠಿಣ ಕ್ರಮ, ಪೆಡ್ಲರ್‌ಗಳಿಗೆ ನಡುಕ

ಮತ್ತಷ್ಟು ಹಣ ಕೊಡದಿದ್ದರೆ ಬೆತ್ತಲೆ ಫೋಟೋ ವೈರಲ್ ಬೆದರಿಕೆ, ಯುವಕ ಆತ್ಮಹತ್ಯೆ

ಮೋದಿ ಬಳಿಕ ಬಿಜೆಪಿಯಿಂದ ಪ್ರಧಾನಿ ಅಭ್ಯರ್ಥಿ ಯಾರು: ಕೊನೆಗೂ ತಿಳಿಸಿದ ಮೋಹನ್ ಭಾಗವತ್

ಸಿದ್ದರಾಮಯ್ಯ ಇರುವಷ್ಟು ದಿನ ಉತ್ತಮ ಹೆಜ್ಜೆ ಇಡಲಿ: ವಿಜಯೇಂದ್ರ

ಮುಂದಿನ ಸುದ್ದಿ
Show comments