Select Your Language

Notifications

webdunia
webdunia
webdunia
webdunia

ಆ ವಿಷಯಕ್ಕೆ ಹೀಗಾ ಮಾಡೋದು?

ಆ ವಿಷಯಕ್ಕೆ ಹೀಗಾ ಮಾಡೋದು?
ಹುಬ್ಬಳ್ಳಿ , ಶುಕ್ರವಾರ, 18 ಅಕ್ಟೋಬರ್ 2019 (14:59 IST)
ಹಣಕಾಸಿನ ವಿಚಾರವಾಗಿ ನಡೆಯಬಾರದ ಘಟನೆ ನಡೆದು ಹೋಗಿದೆ.

ಹಣದ ವಿಚಾರವಾಗಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಘಟನೆಯಲ್ಲಿ ಓರ್ವ ಯುವಕನಿಗೆ ಕಬ್ಬಿಣದ ಸರಳಿನಿಂದ ಹೊಡೆಯಲಾಗಿದೆ. ಇದರ ಪರಿಣಾಮ ಯುವಕನ ತಲೆಗೆ ಗಂಭೀರ ಗಾಯವಾದ ಘಟನೆ ಹಳೇ ಹುಬ್ಬಳ್ಳಿಯ ನಾರಾಯಣ ಸೋಫಾದಲ್ಲಿ ನಡೆದಿದೆ. 

ಘಟನೆಯಲ್ಲಿ ಗಫಾರ್ ಎನ್ನುವ ಯುವಕನ ತಲೆಗೆ ಕಬ್ಬಿಣದ ಸರಳಿನಿಂದ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದು, ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಹಣದ ವಿಚಾರವಾಗಿ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಬಾಬಾ ಫರೀದ್ ಎಂಬಾತ ಕಬ್ಬಿಣದ ಸರಳಿನಿಂದ ಮಾರಣಾಂತಿಕ ಹಲ್ಲೇ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಫರೀದ ನಾಪತ್ತೆಯಾಗಿದ್ದು, ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ನಂದಿನಿ ಮೊಸರು ತಿಂತೀರಾ...? ಈ ಸುದ್ದಿ ಓದಿದ್ರೆ ಬರಬಹುದು ವಾಂತಿ