Webdunia - Bharat's app for daily news and videos

Install App

ಪೊಲೀಸ್ ಠಾಣೆಗೆ ಹಾಜರಾಗಲ್ಲ, ಬೇಕಿದ್ರೆ ನೀವೇ ಮನೆಗೆ ಬನ್ನಿ: ಎಸಿಪಿಗೆ ಬಿಎಸ್‌ವೈ ಪತ್ರ

Webdunia
ಗುರುವಾರ, 28 ಸೆಪ್ಟಂಬರ್ 2017 (11:34 IST)
ವಿಧಾನಪರಿಷತ್ ಸದಸ್ಯ ಕೆ.ಎಸ್.ಈಶ್ವರಪ್ಪ ಆಪ್ತ ಸಹಾಯಕ ವಿನಯ್ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಹಾಜರಾಗಲು ಸಾಧ್ಯವಿಲ್ಲ. ವಿಚಾರಣೆ ಮಾಡಬೇಕಾದ್ರೆ ನಮ್ಮ ಮನೆಗೆ ಬನ್ನಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪತ್ರ ಬರೆದಿದ್ದಾರೆ.
ವಿನಯ್ ಪ್ರಕರಣದಲ್ಲಿ ವಿಚಾರಣೆಗಾಗಿ ಇಂದು ಮಲ್ಲೇಶ್ವರಂ ಪೊಲೀಸ್ ಠಾಣೆಗೆ ಹಾಜರಾಗಬೇಕಿದ್ದ ಯಡಿಯೂರಪ್ಪ, ಇದೀಗ ತಾವು ಖುದ್ದು ಹಾಜರಾಗಲು ಸಾಧ್ಯವಿಲ್ಲ. ನನ್ನ ಪರ ವಕೀಲರು ನಿಮ್ಮ ಮುಂದೆ ಹಾಜರಾಗಲಿದ್ದಾರೆ ಎಂದು ಎಸಿಪಿ ಬಡಿಗೇರ್‌ಗೆ ತಿಳಿಸಿದ್ದಾರೆ. 
 
ನನಗೆ 65 ವರ್ಷವಾಗಿದ್ದರಿಂದ ಭದ್ರತೆಯ ಕಾರಣಗಳಿಂದಾಗಿ ಪೊಲೀಸ್ ಠಾಣೆಗೆ ಹಾಜರಾಗಲು ಸಾಧ್ಯವಿಲ್ಲ. ಯಾವುದೇ ದಾಖಲೆಗಳು ಬೇಕಾದಲ್ಲಿ ನೀಡಲು ಸಿದ್ದ  ಎಂದು ಹೇಳಿದ್ದಾರೆ.
 
ವಿನಯ್ ಮೇಲೆ ಹಲ್ಲೆ, ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಂ 91ರ ಅಡಿಯಲ್ಲಿ ಯಡಿಯೂರಪ್ಪಗೆ ನೋಟಿಸ್ ಜಾರಿ ಮಾಡಲಾಗಿತ್ತು. ಆದರೆ, ನೋಟಿಸ್‌ಗೆ ಉಲ್ಟಾ ಹೊಡೆದಿರುವ ಯಡಿಯೂರಪ್ಪ ಪೊಲೀಸ್ ಠಾಣೆಗೆ ಹಾಜರಾಗುವುದಿಲ್ಲ. ವಿಚಾರಣೆ ಮಾಡುವುದಾದ್ರೆ ನಮ್ಮ ಮನೆಗೆ ಬನ್ನಿ ಎಂದು ಮಲ್ಲೇಶ್ವರಂ ಪೊಲೀಸ್ ಠಾಣೆಯ ಎಸಿಪಿ ಬಡಿಗೇರ್ ಅವರಿಗೆ ಪತ್ರ ಬರೆದಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿಗಣತಿಗೆ ವಿಕಲಚೇತನರ ಬಳಕೆ: ಬಿವೈ ವಿಜಯೇಂದ್ರ ಆಕ್ಷೇಪ

ಕೋಟ್ಯಂತರ ಜನರ ಜೀವನದಲ್ಲಿ ಬದಲಾವಣೆ ತಂದಿರುವ ಗ್ಯಾರಂಟಿ:ರಣದೀಪ ಸುರ್ಜೇವಾಲ

ಎಲ್ಲ ಭಾಗ್ಯಗಳನ್ನು ಹಿಂಪಡೆದು ಮೂರು ನಾಮ ಹಾಕಲು ಸಿದ್ಧತೆ: ಡಾ.ಅಶ್ವತ್ಥನಾರಾಯಣ್

ಮಕ್ಕಳ ಸರಣಿ ಸಾವಿನ ಹಿನ್ನಲೆ: ಕೋಲ್ಡ್ರಿಫ್ ಮಕ್ಕಳ ಸಿರಪ್ ಗೆ ಕರ್ನಾಟಕದಲ್ಲೂ ನಿಷೇಧ

ಜಾತಿ ಸಮೀಕ್ಷೆ ಪ್ರಶ್ನೆ ಕೇಳುವಾಗ ಡಿಕೆ ಶಿವಕುಮಾರ್ ಗರಂ: ಪ್ರಶ್ನೆ ತಯಾರಿಸಿದ್ದು ಯಾರು ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments