Webdunia - Bharat's app for daily news and videos

Install App

ಅರಣ್ಯ ಇಲಾಖೆಯ ಅನುದಾನದಲ್ಲಿ ಕಡಿತ ಮಾಡಬೇಡಿ: DFO ಹರ್ಷ ಬಾನು

Webdunia
ಬುಧವಾರ, 12 ಜನವರಿ 2022 (21:26 IST)
ಮುಂಬರುವ ಬಜೆಟ್ ದಲ್ಲಿ ಅರಣ್ಯ ಇಲಾಖೆಯ ಅನುದಾನದಲ್ಲಿ ಕಡಿತವಾಗದಂತೆ ಕ್ರಮ‌ ವಹಿಸುವಂತೆ ಬೆಳಗಾವಿ ಜಿಲ್ಲೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷ ಬಾನು ಜಿಪಿ ಅರಣ್ಯ ಸಚಿವ ಉಮೇಶ ಕತ್ತಿ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ.ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ತಾಲೂಕಾ ಪಂಚಾಯತ ಸಭಾ ಭವನದಲ್ಲಿ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು,ರಾಜ್ಯ ಸರಕಾರ ಕಳೆದ 8 ವರ್ಷಗಳಿಂದ ಬಜೆಟ್ ದಲ್ಲಿ ಅರಣ್ಯ ಇಲಾಖೆಗೆ ನೀಡುವ ಅನುದಾನದಲ್ಲಿ ಶೇಕಡಾ 8 ರಿಂದ 10 ರಷ್ಟು ಕಡಿತ ಮಾಡುತ್ತಿದ್ದು ಈ ಬಾರಿಯ ಬಜೆಟ್ ದಲ್ಲಿ ಅರಣ್ಯ ಇಲಾಖೆಯ ಅನುದಾನದಲ್ಲಿ ಯಾವುದೇ ಕಡಿತವಾಗದಂತೆ ಕ್ರಮ‌ ವಹಿಸುವಂತೆ ಮನವಿ ಮಾಡಿಕೊಂಡರು.ಇದಕ್ಕೆ ಸ್ಪಂದನೆ ನೀಡಿದ ಅರಣ್ಯ ಸಚಿವ ಉಮೇಶ ಕತ್ತಿ ಈ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಈ‌ ಬಾರಿಯ ಬಜೆಟ್ ದಲ್ಲಿ ಅರಣ್ಯ ಇಲಾಖೆಯ ಅನುದಾನದ ಪಾಲಿನಲ್ಲಿ ಯಾವುದೇ ಕಡಿತಗೊಳಿಸದಂತೆ ಮನವಿ ಮಾಡುತ್ತೇನೆ ಹಾಗೂ ನಗರ ಪ್ರದೇಶಗಳಲ್ಲಿನ ಅರಣ್ಯ ಬೆಳೆಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು. ಸಭೆಯಲ್ಲಿ ಅರಣ್ಯ ಇಲಾಖೆಯ ಮುಖ್ಯ ಸಂರಕ್ಷಣಾಧಿಕಾರಿ ವಿಜಯಕುಮಾರ ಸಾಲಿಮಠ, ವಲಯ ಅರಣ್ಯಾಧಿಕಾರಿ ಪ್ರಸನ್ನ ಬೆಲ್ಲದ, ಉಪ ವಲಯ ಅರಣ್ಯಾಧಿಕಾರಿ ಗಜಾನನ ಪಾಟೀಲ, ಪ್ರದೀಪ ಮಗದುಮ್ ಸೇರಿದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rajastan: ನಿದ್ರಾಜನಕ ಔಷಧಿ ನೀಡಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೇಲೆ ರೇಪ್‌

ಕರ್ನಾಟಕದ ಮರ್ಯಾದೆ ಹಾಳು ಮಾಡಿದ್ದೀರಿ: ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಸೋಮಣ್ಣ ವಾಗ್ದಾಳಿ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments