Webdunia - Bharat's app for daily news and videos

Install App

ನಿಮ್ಮ ನ್ಯೂಸ್‍ಗಳಿಗೆ ನನ್ನ ಬಲಿ ಕೊಡಬೇಡಿ- ಮಾಧ್ಯಮಗಳ ವಿರುದ್ಧ ಸಿಎಂ ಗರಂ

Webdunia
ಬುಧವಾರ, 16 ಜನವರಿ 2019 (07:49 IST)
ಬೆಂಗಳೂರು : ಆಪರೇಷನ್ ಕಮಲದ  ವಿಚಾರಕ್ಕೆ ಸಂಬಂಧಿಸಿದಂತೆ  ನಿಮ್ಮ ನ್ಯೂಸ್‍ಗಳಿಗೆ ನನ್ನ ಬಲಿ ಕೊಡಬೇಡಿ ಎಂದು ಸಿಎಂ ಕುಮಾರಸ್ವಾಮಿ ಮಾಧ್ಯಮಗಳ ವಿರುದ್ಧ ಕಿಡಿಕಾರಿದ್ದಾರೆ.


ನಗರದ ಕೆಕೆ ಗೆಸ್ಟ್ ಹೌಸ್ ಬಳಿ ಮಾತನಾಡಿದ ಸಿಎಂ, ‘ನನ್ನ ಸರ್ಕಾರದ ಶಕ್ತಿ ಎಷ್ಟಿದೆ ಅಂತ ನನಗೆ ಚೆನ್ನಾಗಿ ಗೊತ್ತಿದೆ. ಪಕ್ಷೇತರ ಶಾಸಕರು ಹೋದ ತಕ್ಷಣ ಸರ್ಕಾರ ಬೀಳುವುದಿಲ್ಲ. ಮಾಧ್ಯಮಗಳೇ ಈ ಸರ್ಕಾರದ ಬಗ್ಗೆ ತೀರ್ಮಾನ ಮಾಡುತ್ತಿವೆ. ಆಪರೇಷನ್ ಕಮಲದ ಸುದ್ದಿ ಹಾಕಿದವರು ನೀವು, ಈಗ ನೀವೇ ನನಗೆ ಮಾಹಿತಿ ಕೊಡಬೇಕು. ನಿಮ್ಮ ನ್ಯೂಸ್‍ಗಳಿಗೆ ನನ್ನ ಬಲಿ ಕೊಡಬೇಡಿ’ ಎಂದು ಕಿಡಿಕಾರಿದ್ದಾರೆ.


ಆಪರೇಷನ್ ಕಮಲಕ್ಕೆ ನಾನೇಕೆ ಪ್ರತಿಕ್ರಿಯೆ ನೀಡಬೇಕು? ಸರ್ಕಾರಕ್ಕೆ ಬೇಕಾಗಿರುವ ಬೆಂಬಲ ಎಷ್ಟು? ನನ್ನ ಬಲ ಏನು ಎನ್ನುವುದು ನನಗೆ ಗೊತ್ತಿದೆ. ಮೈತ್ರಿ ಸರ್ಕಾರ ಬಂಡೆಗಲ್ಲು ಇದ್ದಂತೆ. ನಿಮಗೇಕೆ ನನ್ನ ಸರ್ಕಾರದ ಬಗ್ಗೆ ಚಿಂತೆ? ಕಳೆದ ಒಂದು ವಾರದಿಂದ ಆಪರೇಷನ್ ಕಮಲದ ಕುರಿತಾಗಿಯೇ ಹೇಳುತ್ತಿದ್ದೀರಿ. ನೀವೇ ಸರ್ಕಾರ ಬೀಳಿಸುವ ದಿನಾಂಕ ನಿಗದಿ ಮಾಡುತ್ತಿದ್ದೀರಿ ಎಂದು ಮಾಧ್ಯಮಗಳಿಗೆ ಗರಂ ಆಗಿ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments