Webdunia - Bharat's app for daily news and videos

Install App

ಪ್ರತಿಷ್ಠೆಗಾಗಿ ಪಕ್ಷಕ್ಕೆ ಹಾನಿ ಮಾಡಬೇಡಿ- ವೇಣುಗೋಪಾಲ ಎಚ್ಚರಿಕೆ

Webdunia
ಗುರುವಾರ, 7 ಡಿಸೆಂಬರ್ 2017 (20:49 IST)
ಪ್ರತಿಷ್ಠೆಗಾಗಿ ಪಕ್ಷಕ್ಕೆ ಹಾನಿ ಮಾಡುವವರನ್ನು ಸಹಿಸುವುದಿಲ್ಲ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಎಚ್ಚರಿಸಿದ್ದಾರೆ.

ಕಾಂಗ್ರೆಸ್ ಸರಣಿ ಸಭೆಯಲ್ಲಿ ಬೆಳಗಾವಿ ಹಾಗೂ ಗುಲ್ಬರ್ಗ ಕಂದಾಯ ವಿಭಾಗಗಳ ಜಿಲ್ಲೆಗಳ ಮುಖಂಡರು, ಜನಪ್ರತಿನಿಧಿಗಳು ಹಾಗೂ ವಿವಿಧ ಪದಾಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಯಾವುದೇ ಪ್ರತಿಷ್ಠೆಗಳಿಗೆ ಅಂಟಿಕೊಳ್ಳದೆ ಪಕ್ಷದ ಬಲವರ್ಧನೆಗೆ ಶ್ರಮಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ.

ಪಕ್ಷವನ್ನು ಅಧಿಕಾರಕ್ಕೆ ತರುವುದು ಮೊದಲ ಆದ್ಯತೆಯಾಗಿದ್ದು ಪಕ್ಷ ಅಧಿಕಾರ ಹಿಡಿಯಲು ಯಾವುದೇ ಒಳ ಜಗಳಗಳು, ಒಣ ಪ್ರತಿಷ್ಠೆಗಳು ಕಾರಣವಾಗಬಾರದು. ಇದರಿಂದ ಪಕ್ಷಕ್ಕೆ ಹಾನಿಯಾಗಲಿದೆ. ಇದಕ್ಕೆ ಅವಕಾಶ ನೀಡಬಾರದು ಎಂದಿದ್ದಾರೆ.

ಈ ಹಿಂದೆ ನಡೆಸಿದ ಸಭೆಯಲ್ಲಿ ಚರ್ಚಿತವಾದ ಅಂಶಗಳು ಅನುಷ್ಠಾನಗೊಳಿಸಿದ ಬಗ್ಗೆ ವಿವರಣೆಗಳನ್ನು ಪಡೆದಿದ್ದಾರೆ. ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕಾರ್ಯಗಳ ಬಗ್ಗೆ ನಿಗಾ ವಹಿಸಬೇಕು ಎಂದು ತಿಳಿಸಿದ್ದಾರೆ.

ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಪ್ರಚಾರ ಸಮಿತಿ ಅಧ್ಯಕ್ಷ ಎಸ್.ಆರ್.ಪಾಟೀಲ್ ಹಾಗೂ ವಿವಿಧ ಜಿಲ್ಲೆಗಳ ಮುಖಂಡರು ಭಾಗವಹಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

Air India Plane crash: ವಿಮಾನ ದುರಂತದಲ್ಲಿ ಮನುಷ್ಯರೇ ಭಸ್ಮವಾದರೂ ಇದೊಂದು ವಸ್ತು ಹಾಗೆಯೇ ಇತ್ತು video

Arecanut price today: ಅಡಿಕೆ ಬೆಲೆ ಯಥಾಸ್ಥಿತಿ, ಕೊಬ್ಬರಿಗೆ ಬಂಪರ್

Gold Price today: ಅಬ್ಬಾ.. ಚಿನ್ನದ ದರ ಇಷ್ಟೊಂದಾ ಎನ್ನುವಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments