Select Your Language

Notifications

webdunia
webdunia
webdunia
webdunia

ಎಣ್ಣೆ ಕುಡಿಯೋಕೆ ಹಣ ನೀಡಿಲ್ಲ ಅಂತ ಪತ್ನಿಯನ್ನು ಹೀಗೆ ಮಾಡೋದಾ? !

ಎಣ್ಣೆ ಕುಡಿಯೋಕೆ ಹಣ ನೀಡಿಲ್ಲ ಅಂತ ಪತ್ನಿಯನ್ನು ಹೀಗೆ ಮಾಡೋದಾ? !
ಚಿಕ್ಕಬಳ್ಳಾಪುರ , ಶುಕ್ರವಾರ, 24 ಮಾರ್ಚ್ 2023 (07:43 IST)
ಚಿಕ್ಕಬಳ್ಳಾಪುರ : ವ್ಯಕ್ತಿಯೋರ್ವ ಕುಡಿಯಲು ಹಣ ನೀಡಲಿಲ್ಲವೆಂದು ಪತ್ನಿಗೆ ಅನೈತಿಕ ಸಂಬಂಧವಿದೆ ಎಂದು ಆರೋಪಿಸಿ ಆಕೆಯನ್ನು ಮನಸ್ಸೋ ಇಚ್ಛೆ ಹೊಡೆದು ಕೊಂಡು ಹಾಕಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಚಿಕ್ಕದಿಬ್ಬೂರ ಹಳ್ಳಿಯಲ್ಲಿ ನಡೆದಿದೆ.
 
ಗಾಯತ್ರಿ (39) ಮೃತ ಮಹಿಳೆಯಾಗಿದ್ದು, ಅಶ್ವತ್ಥಪ್ಪ ಕೊಲೆ ಮಾಡಿದ ಆರೋಪಿ. ಗಾಯತ್ರಿ ಹಾಗೂ ಅಶ್ವತ್ಥಪ್ಪನಿಗೆ ಮದುವೆಯಾಗಿ 20 ವರ್ಷ ಕಳೆದಿದ್ದು, ಅವರಿಗೆ 18 ವಷದ ಮಗಳು ಹಾಗೂ 14 ವರ್ಷದ ಮಗನಿದ್ದಾನೆ. ಆದರೆ ಅಶ್ವತ್ಥಪ್ಪ ಪ್ರತಿದಿನ ಕುಡಿದು ಬಂದು ಹೆಂಡತಿ ಹಾಗೂ ಮಕ್ಕಳಿಗೆ ಹೊಡೆಯುವುದನ್ನು ಮಾಡುತ್ತಿದ್ದ.

ಇದರಿಂದಾಗಿ ಬೇಸತ್ತ ಪತ್ನಿ ಗಾಯತ್ರಿ ಹಾಗೂ ಮಕ್ಕಳು ಪ್ರತಿನಿತ್ಯ ಅಶ್ವತ್ಥಪ್ಪನಿಂದ ತಪ್ಪಿಸಿಕೊಳ್ಳುತ್ತಿದ್ದರು. ಅಷ್ಟೇ ಅಲ್ಲದೇ ಮಕ್ಕಳನ್ನು ರಾತ್ರಿಯಾದ ಮೇಲೆ ಸಂಬಂಧಿಗಳ ಮನೆಗೆ ಕಳುಹಿಸುತ್ತಿದ್ದಳು. ಜೊತೆಗೆ ಹಣವಿಲ್ಲ ಮಗ ಶಾಲೆ ಬಿಟ್ಟು ಗ್ಯಾರೆಜ್ವೊಂದರಲ್ಲಿ ಕೆಲಸ ಮಾಡುತ್ತಿದ್ದ.

ಆದರೆ ಗುರುವಾರ ಮನೆಗೆ ಬಂದ ಅಶ್ವತ್ಥಪ್ಪ ಕುಡಿಯಲು ಪತ್ನಿ ಬಳಿ ಹಣ ಕೇಳಿದ್ದಾನೆ. ಆದರೆ ಈ ವೇಳೆ ಗಾಯತ್ರಿ ಹಣವನ್ನು ನೀಡುವುದಿಲ್ಲ ಎಂದು ತಿಳಿಸಿದ್ದಾಳೆ. ಇದರಿಂದಾಗಿ ಆಕೆ ಅನೈತಿಕ ಸಂಬಂಧವನ್ನು ಹೊಂದಿದ್ದಾಳೆ ಎಂದು ಶಂಕಿಸಿದ ಅಶ್ವತ್ಥಪ್ಪ ಆಕೆಗೆ ದೊಣ್ಣೆ ಹಾಗೂ ಮಾರಕಾಸ್ತ್ರಗಳಿಂದ ಹೊಡೆದಿದ್ದಾನೆ. ಈ ವೇಳೆ ಗಂಭೀರ ಗಾಯಗೊಂಡಿದ್ದ ಗಾಯತ್ರಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. 

Share this Story:

Follow Webdunia kannada

ಮುಂದಿನ ಸುದ್ದಿ

ಚಿಕ್ಕಬೆಟ್ಟದ ತಪ್ಪಲಲ್ಲಿ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯ ಅಂತ್ಯಕ್ರಿಯೆ