Webdunia - Bharat's app for daily news and videos

Install App

ಕಾವೇರಿ-ಕಷ್ಣೆಗಾಗಿ ವಕೀಲರಿಗೆ ಮಾಡಿದ ವೆಚ್ಚ ಎಷ್ಟು ಗೊತ್ತೆ!

Webdunia
ಶನಿವಾರ, 1 ಅಕ್ಟೋಬರ್ 2016 (15:16 IST)
ಕಾವೇರಿ ಹಾಗೂ ಕೃಷ್ಣ ನ್ಯಾಯಾಧೀಕರಣದ ವಾದ ಮಂಡಿಸಲು ವಕೀಲರಿಗೆ ನೀಡಿದ ಹಣವನ್ನು ರಾಜ್ಯ ಸರಕಾರ ಮರಳಿ ಪಡೆಯಬೇಕೆಂದು ಆರ್‌ಟಿಐ ಕಾರ್ಯಕರ್ತ ಭೀಮಪ್ಪ ಗಡಾದ ಆಗ್ರಹಿಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ಹಾಗೂ ಕೃಷ್ಣ ನ್ಯಾಯಾಧೀಕರಣಕ್ಕೆ ಇಲ್ಲಿಯವರೆಗೂ ರಾಜ್ಯ ಸರಕಾರ 76.21 ಲಕ್ಷ ರೂಪಾಯಿ ವೆಚ್ಚ ಮಾಡಿದೆ. ಆದರೆ, ಎರಡು ನ್ಯಾಯಾಧೀಕರಣದ ಮುಂದೆ ವಾದ ಮಂಡಿಸಲು ರಾಜ್ಯದ ಪರ ವಕೀಲರು ವಿಫಲರಾಗಿದ್ದಾರೆ. ಈವರೆಗೂ ಕಾವೇರಿ ನ್ಯಾಯಾಧೀಕರಣದ ಮುಂದೆ 580 ಬಾರಿ ವಿಚಾರಣೆ ನಡೆದಿದೆ . ಇದಕ್ಕಾಗಿ ಸರಕಾರದ ಪರ ವಕೀಲರಿಗೆ 36.52 ಲಕ್ಷ ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ ಎಂದು ದಾಖಲೆ ಸಮೇತ ಆರೋಪಿಸಿದ್ದರು. 
 
ಕೃಷ್ಣ ನ್ಯಾಯಾಧೀಕರಣದ ಮುಂದೆ 306 ಸಿಟಿಂಗ್ ಆಗಿದ್ದು, ಇದಕ್ಕಾಗಿ ಸರಕಾರಿ ವಕೀಲರಿಗೆ 36.67 ಕೋಟಿ ರೂಪಾಯಿ ವೆಚ್ಚ ಮಾಡಿದೆ. ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ 9 ಕೋಟಿ ರೂಪಾಯಿ ವೆಚ್ಚ ಮಾಡಿದ್ದು, ಇದರಲ್ಲಿ ದೆಹಲಿಯ ಹಿರಿಯ ವಕೀಲ ಅನಿಲ ದಿವಾನ್ ಅವರಿಗೆ ಕಾವೇರಿ ಹಾಗೂ ಕೃಷ್ಣಗಾಗಿ 26.26 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ. 
 
ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯದ ಪರವಾಗಿ ವಾದ ಮಂಡಿಸುವ ಫಾಲಿ ನಾರಿಮನ್ ಅವರಿಗೆ 14.76 ಕೋಟಿ ರೂಪಾಯಿ ಸೇರಿದಂತೆ 10 ವಕೀಲರಿಗಾಗಿ ರಾಜ್ಯ ಸರಕಾರ ಕೋಟಿ ಕೋಟಿ ವೆಚ್ಚ ಮಾಡಿದ್ದರೂ ನ್ಯಾಯಾಲಯದಲ್ಲಿ ರಾಜ್ಯಕ್ಕೆ ಹಿನ್ನೆಡೆಯಾಗಿದೆ. ಹೀಗಾಗಿ ಈವರೆಗೂ ವೆಚ್ಚ ಮಾಡಿರುವ ಹಣವನ್ನು ಅವರಿಂದ ರಾಜ್ಯ ಸರಕಾರ ವಾಪಸ್ ಪಡೆಯಬೇಕು ಎಂದು ಆರ್‌ಟಿಐ ಕಾರ್ಯಕರ್ತ ಭೀಮಪ್ಪ ಗಡಾದ ಆಗ್ರಹಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗ್ಯಾರಂಟಿ ಹೊರೆ ಜನರ ತಲೆಗೆ: ವಿದ್ಯುತ್ ಬಿಲ್ ಜೊತೆ ನೌಕರರ ವೆಚ್ಚಕ್ಕೂ ಇನ್ನು ನೀವೇ ಹೊಣೆ

Karnataka Weather: ಇಂದಿನಿಂದ ಈ ಜಿಲ್ಲೆಗಳಿಗೆ ಭಾರೀ ಮಳೆ, ಆರೆಂಜ್, ಯೆಲ್ಲೊ ಅಲರ್ಟರ್ ಎಲ್ಲೆಲ್ಲಿ

ಭೀಕರ ಭೂಕುಸಿತವಾಗಿದ್ದ ವಯನಾಡಿನಲ್ಲಿ ನಾಳೆ ಭಾರೀ ಮಳೆ ಸಾಧ್ಯತೆ

ಪೋಷಕರನ್ನು ವೃದ್ಧಾಶ್ರಮಕ್ಕೆ ಸೇರಿಸಿದ ಮಗ: ಮನನೊಂದು ದಂಪತಿ ಆತ್ಮಹತ್ಯೆ

ಕೆಆರ್‌ಎಸ್‌ ಉದ್ಯಾನವನದಲ್ಲಿ ಕಾವೇರಿ ಆರತಿಗೆ ರಾಜ್ಯ ಸರ್ಕಾರ ಚಿಂತನೆ

ಮುಂದಿನ ಸುದ್ದಿ
Show comments