Select Your Language

Notifications

webdunia
webdunia
webdunia
webdunia

ಮುಖ್ಯಮಂತ್ರಿಯಾಗಲಿರುವ ಹೆಚ್.ಡಿ.ಕುಮಾರಸ್ವಾಮಿಗೆ ದೇವೆಗೌಡರು ನೀಡಿದ ಸಲಹೆಯೇನು ಗೊತ್ತಾ?

ಮುಖ್ಯಮಂತ್ರಿಯಾಗಲಿರುವ  ಹೆಚ್.ಡಿ.ಕುಮಾರಸ್ವಾಮಿಗೆ ದೇವೆಗೌಡರು ನೀಡಿದ ಸಲಹೆಯೇನು ಗೊತ್ತಾ?
ಬೆಂಗಳೂರು , ಬುಧವಾರ, 23 ಮೇ 2018 (14:33 IST)
ಬೆಂಗಳೂರು : ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸುತ್ತಿರುವ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಇದೀಗ ಜೆಡಿಎಸ್ ನ ರಾಷ್ಟ್ರಾಧ್ಯಕ್ಷ, ಮಾಜಿ ಪ್ರಧಾನಿ ದೇವೆಗೌಡರು ಸಲಹೆಗಳನ್ನು ನೀಡಿದ್ದಾರೆ.


ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ದೇವೇಗೌಡರು,’ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಭಿನ್ನಾಭಿಪ್ರಾಯ ಉಂಟಾಗದಂತೆ ನೋಡಿಕೊಳ್ಳಬೇಕು. ರೈತರ ಬೆಳೆ ಸಾಲ ಮನ್ನಾ ಸೇರಿದಂತೆ ಕೆಲವು ಮಹತ್ವದ ವಿಚಾರಗಳು ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಮಾಡಬೇಕಾಗುತ್ತದೆ. ಸಮನ್ವಯ ಸಮಿತಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಇರುತ್ತಾರೆ. ಅವರೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಬೇಕೆಂದು ಕಿವಿಮಾತು ಹೇಳಿದ್ದೇನೆ’ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಜೆಡಿಎಸ್, ಕಾಂಗ್ರೆಸ್ ಮೈತ್ರಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಮುಖಂಡ ಜಗ್ಗೇಶ್