Webdunia - Bharat's app for daily news and videos

Install App

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿ ಹೇಗೆ ಕೊಲೆಯಾದಳು ಗೊತ್ತಾ? ಕೇಳಿದ್ರೆ ಶಾಕ್ ಆಗ್ತೀರಾ…

Webdunia
ಬುಧವಾರ, 1 ಆಗಸ್ಟ್ 2018 (21:22 IST)
ಎಸ್ ಎಸ್ ಎಲ್ ಸಿ ಓದುತ್ತಿದ್ದ 15 ವರ್ಷದ ಬಾಲಕಿಯನ್ನು ಅಪಹರಿಸಿ ಅಮಾನುಷವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಕೋಲಾರ ಜಿಲ್ಲೆಯಲ್ಲಿ  ಅಪ್ರಾಪ್ತ ಬಾಲಕಿಯ ಬರ್ಬರ ಕೊಲೆಯಾಗಿದೆ.

ಬಾಲಕಿಯೊಬ್ಬಳನ್ನು ಅಪರಿಚಿತ ಯುವಕರು ಕಲ್ಲಿನಿಂದ ಜಜ್ಜಿ ಅಮಾನುಷವಾಗಿ ಕೊಲೆಗೈದಿರುವ ಘಟನೆಯು ಮಾಲೂರು ಪಟ್ಟಣದಲ್ಲಿ ನಡೆದಿದೆ.

ಶಾಲೆ ಮುಗಿಸಿಕೊಂಡು ಮನೆಗೆ ಹಿಂತಿರುಗುತ್ತಿದ್ದ ಬಾಲಕಿಯನ್ನು ಅಪಹರಿಸಿ ಕೊಲೆ ಮಾಡಲಾಗಿದೆ. ಮೃತಪಟ್ಟ ಬಾಲಕಿಯನ್ನು ರೈಲ್ವೇ ನಿಲ್ದಾಣದ ಸಮೀಪ ಇರುವ ಇಂದಿರಾನಗರದ ರಕ್ಷಿತಾ(15) ಎಂದು ಗುರುತಿಸಲಾಗಿದೆ. ಪಟ್ಟಣದ ರೈಲ್ವೇ ನಿಲ್ದಾಣದ ಸಮೀಪ ಇರುವ ಬಾಲಗಂಗಾರನಾಥ ವಿದ್ಯಾಸಂಸ್ಥೆಯ 10 ನೇ ತರಗತಿಯಲ್ಲಿ ರಕ್ಷಿತಾ ವ್ಯಾಸಂಗ ಮಾಡುತ್ತಿದ್ದಳು. ಎಂದಿನಂತೆ   ಶಾಲೆಯಿಂದ ಸಂಜೆ ಮನೆಗೆ ಹೋಗುತ್ತಿರುವ ಸಮಯದಲ್ಲಿ ಕೆಲ ಯುವಕರು ಬಾಲಕಿಯನ್ನು ಅಡ್ಡಗಟ್ಟಿ ಕಲ್ಲಿನಿಂದ ತಲೆಗೆ ಹೊಡೆದಿದ್ದಾರೆ. ಇದರಿಂದ ಬಾಲಕಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ.

ರಕ್ಷಿತಾ ಮೃತಪಟ್ಟಿರುವ ಬಗ್ಗೆ ವಿಷಯ ತಿಳಿದ ಪೋಷಕರು, ಸಂಬಂಧಿಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು. ಇದರಿಂದ ಮಾಲೂರು ಹೊಸೂರು ಮುಖ್ಯ ರಸ್ತೆಯಲ್ಲಿ ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು. ಕೂಡಲೇ ಪಟ್ಟಣದ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮೃತಪಟ್ಟ ಬಾಲಕಿಯನ್ನು ಸರಕಾರಿ ಆಸ್ಪತ್ರೆಗೆ ಸಾಗಿಸಿದರು. ಬಾಲಕಿಯನ್ನು ಕೊಂದವರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಆಸ್ಪತ್ರೆಯ ಮುಂಭಾಗದಲ್ಲಿ ಕರವೇ, ವಿವಿಧ ಸಂಘಟನೆಗಳು ಹಾಗೂ ಸಾರ್ವಜನಿಕರು ಪ್ರತಿಭಟನೆ ನಡೆಸಿದರು.

ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೋಲಿಸ್ ಬಂದೋಬಸ್ತ್ ಮಾಡಿದ್ದಾರೆ. ಬಾಲಕಿಯ ಸಾವಿಗೆ ಕಾರಣರಾದವರ ವಿರುದ್ಧ ಕ್ರಮ ಜರುಗಿಸುವಂತೆ ಒತ್ತಾಯಿಸುವ ಪೋಷಕರ ಆಕ್ರಂದನ ಮುಗಿಲುಮುಟ್ಟಿತ್ತು.



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments