Webdunia - Bharat's app for daily news and videos

Install App

ಪ್ರತಾಪ್ ಸಿಂಹ ಸಿಎಂ ಭೇಟಿ ಆಗಿದ್ದೇಕೆ ಗೊತ್ತಾ?

Webdunia
ಬುಧವಾರ, 26 ಸೆಪ್ಟಂಬರ್ 2018 (16:53 IST)
ರಾಜ್ಯ ರಾಜಕೀಯ ಹಾಗೂ ಪರಿಷತ್ ಮೆಗಾಫೈಟ್ ನಡೆಯುತ್ತಿರುವ ಈ ಸಂದರ್ಭದಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ್ ಅವರು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರನ್ನು ಭೇಟಿ ಮಾಡಿದ್ದಾರೆ.

ಮಂಡ್ಯದಲ್ಲಿ ಸಿಎಂ ಹೆಚ್.ಡಿ. ಕುಮಾರಸ್ವಾಮಿಯವರನ್ನು ಪ್ರತಾಪ್ ಸಿಂಹ ಭೇಟಿಯಾದರು. ಭೇಟಿ ನಂತರ ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿದ್ದು, ಇತ್ತೀಚೆಗೆ ಪ್ರಧಾನಿ ಮೈಸೂರಿಗೆ ಭೇಟಿ ನೀಡಿದಾಗ ಮೈಸೂರು- ಬೆಂಗಳೂರು ಎಕ್ಸ್‌ಪ್ರೆಸ್‌ ಹೈವೆಗೆ  ಅನುಮತಿ ನೀಡಿದ್ದರು. ಆದರೆ ಇದಕ್ಕೆ ಕೆಲ ಮರಗಳನ್ನು ನಾಶ ಮಾಡಬೇಕೆಂಬ ಬಗ್ಗೆ ವರದಿ ಆಗಿತ್ತು. ಮರಗಳ ಸರ್ವೆ ಬಗ್ಗೆ ಅರಣ್ಯ ಇಲಾಖೆ ಮಾಹಿತಿ ನೀಡಿದೆ. ಇದು 7000 ಕೋಟಿಯ  ಯೋಜನೆ. ಮರಗಳ ವಿಚಾರದಲ್ಲಿ ಎಕ್ಸ್ ಪ್ರೆಸ್ ಹೈವೆ ವಿಳಂಬ ಆಗ್ತಿದೆ. ಈ ಬಗ್ಗೆ ಸಿಎಂ ಜೊತೆ ಮಾತುಕತೆ ಮಾಡಿದ್ದೇನೆ ಎಂದರು.

ಸಚಿವ ರೇವಣ್ಣ ಅವರಿಗೂ ಮಾಹಿತಿ ನೀಡಿದ್ದೇನೆ ಎಂದ ಪ್ರತಾಪ್ ಸಿಂಹ, ಮುಖ್ಯಮಂತ್ರಿ ಗಳು ನಮ್ಮ ಸಮಸ್ಯೆ ಗೆ ಸ್ಪಂದಿಸಿದ್ದಾರೆ. ಶೀಘ್ರ ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ಹೈವೆ ಕಾಮಗಾರಿ ಆರಂಭ ಆಗಲಿದೆ ಎಂದರು.

ಸಿಎಂ ಜೊತೆ ರಾಜಕೀಯದ ಬಗ್ಗೆ ಮಾತನಾಡಿದ್ರಾ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಚುನಾವಣೆ ಸಂದರ್ಭದಲ್ಲಷ್ಟೇ ನಾನು ರಾಜಕಾರಣ ಮಾತನಾಡೋದು. ಬೇರೆ ಸಂದರ್ಭದಲ್ಲಿ ರಾಜಕೀಯ ಅಗತ್ಯ ಇಲ್ಲ ಎಂದರು.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments