Webdunia - Bharat's app for daily news and videos

Install App

ಸಿಎಂಗೆ ಸಚಿವ ಬರೆದ ಪತ್ರದಲ್ಲೇನಿದೆ ಗೊತ್ತಾ?

Webdunia
ಮಂಗಳವಾರ, 2 ಅಕ್ಟೋಬರ್ 2018 (16:31 IST)
ರಾಜ್ಯ ಸರಕಾರಿ ಕಚೇರಿಗಳಲ್ಲಿ ವಾರದಲ್ಲಿ ಐದು ದಿನ ಕಚೇರಿ ಕಾರ್ಯನಿರ್ವಹಿಸಬೇಕೆಂದು ಸಿಎಂ ಯೋಚನೆ ಮಾಡುತ್ತಿದ್ದಾರೆ. ಏತನ್ಮಧ್ಯೆ ಸಚಿವರೊಬ್ಬರು ಸಿಎಂಗೆ ಪತ್ರ ಬರೆದು ಸಲಹೆ ನೀಡಿದ್ದಾರೆ.

ರಾಜ್ಯ ಸರ್ಕಾರಿ ಕಚೇರಿಗಳಲ್ಲಿ 5 ದಿನ ಕೆಲಸ ಜಾರಿ ಬಗ್ಗೆ ಸಿಎಂಗೆ ಪತ್ರ ಬರೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾನವ ಸಂಪನ್ಮೂಲ ಹೇಗೆ ಹೆಚ್ಚು ಬಳಸಬಹುದು ಅಂತ ಸಿಎಂಗೆ ಪತ್ರಬರೆದಿರುವ ಸಚಿವರು ಸ್ಪಷ್ಟನೆ ಕೊಟ್ಟಿದ್ದಾರೆ.
5 ದಿನಗಳಲ್ಲಿ ನಾಲ್ಕು ಗಂಟೆ ಮಾತ್ರ ಕೆಲಸ ಮಾಡಿಸಿ ಅಂತಾ ನಾನು ಪತ್ರ ಬರೆದಿಲ್ಲ ಎಂದು ಕಲಬುರಗಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ರಾಜ್ಯ ಸರ್ಕಾರಿ ಕಚೇರಿಗಳಲ್ಲಿ ಬೆಳಗ್ಗೆ 10.30ಕ್ಕೆ ರಿಪೋರ್ಟಿಂಗ್ ಟೈಮ್ ಇದೆ. ಬೆಳಗ್ಗೆ 9.30ರಿಂದ 6 ಗಂಟೆಯವರೆಗೆ ಸರ್ಕಾರಿ ಕಚೇರಿಗಳಲ್ಲಿ ಕೆಲಸ ಮಾಡಲಿ. ಸಾಕಷ್ಟು ಮಹನೀಯರ ಜಯಂತಿಗಳಿಗೆ ರಜೆ ಘೋಷಿಸಿದ್ದೇವೆ. ಮಾನವ ಸಂಪನ್ಮೂಲ ಇದರಲ್ಲೇ ತೊಡಗಿದೆ ಏನೋ ಅಂತಾ ವೈಯಕ್ತಿಕ ಅಭಿಪ್ರಾಯವಾಗಿದೆ ಎಂದರು.

ಕಾಯಕವೇ ಕೈಲಾಸ ಎಂದ ಬಸವಣ್ಣರ ಜಯಂತಿ ದಿನವೇ ರಜೆ ತೆಗೆದುಕೊಳ್ತೇವೆ. ಡಾ.ಬಿ.ಆರ್.ಅಂಬೇಡ್ಕರ್‌ ಅವರೇನೂ ರಜೆ ತೆಗೆದುಕೊಂಡು ನಮಗೆ ಸಂವಿಧಾನ ಕೊಟ್ಟಿಲ್ಲ. ಎಲ್ಲ ಮಹನೀಯರು ಶ್ರಮಪಟ್ಟಿದ್ದಾರೆ, ಅದೇ ರೀತಿ ನಾವು ಕಷ್ಟ ಪಡೋಣ. ಮಹನೀಯರ ಹೆಸರಲ್ಲಿ ರಜೆ ತೆಗೆದುಕೊಳ್ಳಬಾರದು, ಹೆಚ್ಚು ಕೆಲಸ ಮಾಡಲಿ. ಕೆಲಸದ ವೇಳೆ ಕಡಿಮೆ ಮಾಡಿ ಅಂತಾ ನಾನೇನೂ ಹೇಳಿಲ್ಲ ಎಂದರು.

ಮಾನವ ಸಂಪನ್ಮೂಲ ಸಮರ್ಪಕವಾಗಿ ಬಳಕೆ ಮಾಡಬೇಕೆಂದು ಪತ್ರ ಬರೆಯಲಾಗಿದೆ. ರೆಸ್ಟ್ರಿಕ್ಟೆಡ್ ಹಾಲಿಡೇಸ್ ಮಾಡಲಿ, ವಿವಿಧತೆಯಲ್ಲಿ ಐಕ್ಯತೆ ಇರೋ ದೇಶ ನಮ್ಮದು. ಆಯಾ ಸಮುದಾಯದವರು ತಮಗೆ ಬೇಕಾದ ದಿನ ರಜೆ ತೆಗೆದುಕೊಳ್ಳಲಿ. ರಾಜ್ಯ ಸರ್ಕಾರ ನೇಮಿಸಿದ 6ನೇ ವೇತನ ಆಯೋಗವು ಶಿಫಾರಸು ಮಾಡಿದೆ. ಸರ್ಕಾರಿ ನೌಕರರ ಸಂಘದ ಒತ್ತಾಯ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಆದ್ರೆ ಸರ್ಕಾರಿ ನೌಕರರ ಸಂಘದ ಒತ್ತಡದಿಂದ ನಾನು ಸಿಎಂಗೆ ಪತ್ರ ಬರೆದಿಲ್ಲ ಎಂದು ಕಲಬುರಗಿಯಲ್ಲಿ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ಮೇಲೆ ಅಮೆರಿಕಾ ಸುಂಕ ಹಾಕುತ್ತಿರುವುದಕ್ಕೆ ಅಸಲಿ ಕಾರಣ ಇಲ್ಲಿದೆ

ಧರ್ಮಸ್ಥಳದಲ್ಲಿ ಇಂದು ಎಸ್ಐಟಿ ಕಾರ್ಯಾಚರಣೆ ಹೇಗಿರಲಿದೆ

ಸರ್ಕಾರದ ವಿರುದ್ಧ ಕೆಎಸ್ಆರ್ ಟಿಸಿ, ಬಿಎಂಟಿಸಿ ಸಮರ: ಈ ದಿನದಿಂದ ರಸ್ತೆಗಿಳಿಯಲ್ಲ ಬಸ್

ರಾಹುಲ್ ಗಾಂಧಿ ಮತಕಳ್ಳತನದ ಪ್ರತಿಭಟನೆ ಯಾವಾಗ ಡಿಕೆ ಶಿವಕುಮಾರ್ ಹೇಳಿದ್ದೇನು

ಚುನಾವಣಾ ಆಯೋಗದ ಅನ್ಯಾಯದ ಬಗ್ಗೆ ಹೋರಾಡಬೇಕಿದೆ: ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments