Webdunia - Bharat's app for daily news and videos

Install App

ಮದುವೆ ಮನೆಗೆ ಬೆಂಕಿ ಇಟ್ಟ ದುರುಳರಿಗೆ ಆದ ಶಿಕ್ಷೆ ಏನು ಗೊತ್ತಾ?

Webdunia
ಮಂಗಳವಾರ, 3 ಜುಲೈ 2018 (17:33 IST)
ಆ ಕಿರಾತಕರು ದುರುದ್ದೇಶದಿಂದಲೇ ಮದುವೆ ಮನೆಗೆ ಬೆಂಕಿ ಇಟ್ಟಿದ್ದರು. ಹೀಗಾಗಿ ಸಡಗರದಲ್ಲಿರಬೇಕಿದ್ದ ಮದುವೆ ಮನೆಯವರು ನೋವಿನಲ್ಲಿ ಕೈತೊಳೆಯುವ ಹಾಗಾಗಿತ್ತು. ಆದರೆ ನ್ಯಾಯಾಲಯ ನೊಂದವರ ಪರ ತೀರ್ಪು ನೀಡಿದೆ. ಅಷ್ಟೇ ಅಲ್ಲ ಮದುವೆ ಮನೆಗೆ ಬೆಂಕಿ ಇಟ್ಟ ದುರುಳರಿಗೆ ತಕ್ಷ ಶಿಕ್ಷೆಯನ್ನೂ ಪ್ರಕಟಿಸಿದೆ. 
 
ಮದುವೆ ಮನೆಗೆ ಬೆಂಕಿಇಟ್ಟ ದುರುಳರಿಗೆ ಕುಂದಾಪುರದ ಜಿಲ್ಲಾ ಹೆಚ್ಚುವರಿ ಸತ್ರ ನ್ಯಾಯಾಲಯ ಏಳು ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. 2015ರಲ್ಲಿ ಬೈಂದೂರು ತೆಗ್ಗರ್ಸೆಯ ಅರಳಿಕಟ್ಟೆಯಲ್ಲಿ ಮದುವೆ ಮನೆಗೆ ರಾಜೇಶ ಶೆಟ್ಟಿ(35), ರಾಘವೇಂದ್ರ ಶೆಟ್ಟಿ (33) ಬೆಂಕಿ ಇಟ್ಟಿದ್ದರು. ದ್ವೇಷದ ಹಿನ್ನೆಲೆಯಲ್ಲಿ ಚಿಕ್ಕಮ್ಮನ ಮನೆಗೆ ಬೆಂಕಿ ಇಟ್ಟಿದ್ದರು.

ಸುಶೀಲ್ ಶೆಟ್ಟಿ ಎಂಬುವರಿಗೆ ಸೇರಿದ ಮನೆ ಅದಾಗಿತ್ತು. ಮನೆ ಮಂದಿ ಮದುವೆ ಸಮಾರಂಭಕ್ಕೆ ತೆರಳಿದ್ದರು. ಆಗ ಅಕ್ರಮ ಪ್ರವೇಶ ಮಾಡಿ ವಸ್ತುಗಳಿಗೆ ಹಾನಿ ಮಾಡಿದ್ದಲ್ಲದೇ ಸೀಮೆ ಎಣ್ಣೆ ಸುರಿದು ಮನೆಗೆ ಅಪರಾಧಿಗಳು ಬೆಂಕಿ ಇಟ್ಟಿದ್ದರು. ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ದೋಷಿಗಳೆಂದು    ನ್ಯಾಯಾಧೀಶ ಪ್ರಕಾಶ ಖಂಡೇರಿಯವರು ತೀರ್ಪು ನೀಡಿದ್ದಾರೆ. ಪ್ರಾಸಿಕ್ಯೂಷನ್ ಪರ ಪ್ರಕಾಶಶ್ಚಂದ್ರ ಶೆಟ್ಟಿ ವಾದ ಮಂಡಿಸಿದ್ದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments