ಅಂಬಾರಿ ಹೊರಲಿರುವ ಅಭಿಮನ್ಯುವಿನ ತೂಕವೆಷ್ಟು ಗೊತ್ತಾ, ಇತರ ಆನೆಗಳಿಗಿಂತ ಈತನೇ ಸ್ಟ್ರಾಂಗು ಗುರು

Sampriya
ಭಾನುವಾರ, 25 ಆಗಸ್ಟ್ 2024 (13:11 IST)
Photo Courtesy X
ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ದಸರಾ ಅಂಬಾರಿಯಲ್ಲಿ ಭಾಗವಹಿಸಲು ಮೊದಲ ಹಂತದಲ್ಲಿ ಮೈಸೂರಿಗೆ ಆಗಮಿಸಿರುವ 9 ಆನೆಗಳಿಗೆ ತೂಕ ಹಾಕುವ ಪ್ರಕ್ರಿಯೆ ನಡೆಯಿತು. ಕ್ಯಾಪ್ಟನ್‌ ಅಭಿಮನ್ಯು ಅತಿ ಹೆಚ್ಚು ತೂಕ ಹೊಂದಿದ್ದಾನೆ.

ಹಿಂದಿನ ದಸರಾ ಸಂದರ್ಭದಲ್ಲಿ ಅರ್ಜುನ ಅತಿಹೆಚ್ಚು ಭಾರ ತೂಗುತ್ತಿದ್ದ. ಆದರೆ, ಆತ ಕೆಲ ತಿಂಗಳ ಹಿಂದೆ ಮೃತಪಟ್ಟಿದ್ದಾನೆ. ಈ ಬಾರಿ ಕ್ಯಾಪ್ಟನ್‌ ಅಭಿಮನ್ಯು ಅತಿ ಹೆಚ್ಚು ಭಾರ ತೂಗಿದೆ.
ಬರೋಬ್ಬರಿ 5,560 ಕೆಜಿ ತೂಕವನ್ನು ಅಭಿಮನ್ಯು ಹೊಂದಿದ್ದು, ಎರಡನೇ ಸ್ಥಾನದಲ್ಲಿ ಧನಂಜಯ ಆನೆ ಇದೆ.

ಧನಂಜಯ 5,155 ಕೆ.ಜಿ., ಗೋಪಿ 4,970 ಕೆ.ಜಿ., ಇದೇ ಮೊದಲ ಬಾರಿಗೆ ದಸರಾ ಮಹೋತ್ಸವದಲ್ಲಿ ಭಾಗಿಯಾಗಿರುವ ಏಕಲವ್ಯ 4,730 ಕೆ.ಜಿ., ಭೀಮ 4,945 ಕೆ.ಜಿ., ಹೆಣ್ಣಾನೆಗಳಾದ ವರಲಕ್ಷ್ಮೀ 3,495 ಕೆ.ಜಿ., ಲಕ್ಷ್ಮೇ 2,480 ಕೆ.ಜಿ. ತೂಕ ಇವೆ.

ಕಾಡಿನಿಂದ ನಾಡಿಗೆ ಬರುವ ಗಜಪಡೆಯನ್ನು ತಾಲೀಮಿಗೂ ಮುನ್ನ ತೂಕ ಪರೀಕ್ಷೆ ಮಾಡಲಾಗುತ್ತದೆ. ಜಂಬೂ ಸವಾರಿ ಮೆರವಣಿಗೆ ಹಿಂದಿನ ದಿನ ಮತ್ತೊಮ್ಮೆ ತೂಕ ಪರೀಕ್ಷೆ ಮಾಡಲಾಗುತ್ತದೆ. ಮೊದಲ ಹಂತದ 9 ಗಜಪಡೆಗಳು ಆರೋಗ್ಯವಾಗಿವೆ ಎಂದು ಡಿಸಿಎಫ್‌ ಪ್ರಭುಗೌಡ ಮಾತನಾಡಿದರು.

ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಗಜಪಯಣದ ಮೂಲಕ ಮೈಸೂರಿಗೆ ಆಗಮಿಸಿದ್ದ ಮೊದಲ ಹಂತದ ಅಭಿಮನ್ಯು ನೇತೃತ್ವದ 9 ಆನೆಗಳನ್ನು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ ಅರಮನೆ ಒಳಗೆ ಸ್ವಾಗತಿಸಲಾಯಿತು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಸರಕಾರದಿಂದ ಒಳಮೀಸಲಾತಿ ಆದೇಶ ರದ್ದು ಮಾಡುವ ದುರುದ್ದೇಶ: ಗೋವಿಂದ ಕಾರಜೋಳ

ರಾಜಕೀಯದಲ್ಲಿ ಹೊಸ ಇನಿಂಗ್ಸ್‌ ಆರಂಭಿಸಲು ಸಜ್ಜಾದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್

ಮಾನವಿಯತೆಯೇ ಇಲ್ಲ, ಬೈಕ್ ಸವಾರನಿಗೆ ಕಾರಿನಿಂದ ಢಿಕ್ಕಿ ಹೊಡೆದು ಕೊಂದ ದಂಪತಿ: ವಿಡಿಯೋ

ಸಿದ್ದರಾಮಯ್ಯನವರೇ ನೀವು ಕರ್ನಾಟಕಕ್ಕೆ ಸಿಎಂ, ವಯನಾಡಿನ ವಕ್ತಾರರಲ್ಲ: ಆರ್ ಅಶೋಕ್ ವಾಗ್ದಾಳಿ

ಸೈಡ್ ಇಫೆಕ್ಟ್ ಇರುವ ಔಷಧಿ ತೆಗೆದುಕೊಳ್ಳಬಾರದೇ, ಡಾ ಸಿಎನ್ ಮಂಜುನಾಥ್ ಟಿಪ್ಸ್

ಮುಂದಿನ ಸುದ್ದಿ
Show comments