Webdunia - Bharat's app for daily news and videos

Install App

ಹಣ ನೀಡಲ್ಲ ಎಂದ ತಾಯಿಗೆ ಕುಡುಕ ಮಗ ಮಾಡಿದ್ದೇನು ಗೊತ್ತಾ?

Webdunia
ಶುಕ್ರವಾರ, 18 ಜನವರಿ 2019 (06:22 IST)
ಚಿಕ್ಕಮಗಳೂರು : ಹಣ ನೀಡಲು ನಿರಾಕರಿಸಿದ್ದಕ್ಕೆ ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬ  ವೃದ್ಧ ತಾಯಿಯನ್ನೇ ಬರ್ಬರವಾಗಿ ಹತ್ಯೆ ಮಾಡಿ ರೋಡಿಗೆಸೆದ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಹೊರಟ್ಟಿ ಗ್ರಾಮದಲ್ಲಿ ನಡೆದಿದೆ.


ಮೀನಾಕ್ಷಿ ಮಗನಿಂದ ಕೊಲೆಯಾದ ದುರ್ದೈವಿ. ಗಣೇಶ್(48) ಹಣಕ್ಕಾಗಿ ತಾಯಿಯನ್ನೇ ಕೊಲೆ ಮಾಡಿದ ಪಾಪಿ ಮಗ. ಗಣೇಶ್ ತನ್ನ ತಾಯಿಯೊಂದಿಗೆ ವಾಸವಾಗಿದ್ದು, ಕೆಲವು ವರ್ಷಗಳ ಹಿಂದೆ ಅಪಘಾತವೊಂದರಲ್ಲಿ ಕಾಲು ಕಳೆದುಕೊಂಡಿದ್ದನು. ಇದರಿಂದ ತಾಯಿಯೇ ದುಡಿದು ಸಂಸಾರವನ್ನು ನಡೆಸುತ್ತಿದ್ದರು.


ಆದರೆ ಇತ್ತೀಚೆಗೆ ತಾಯಿಗೆ ಸರ್ಕಾರದಿಂದ ಸುಮಾರು 1.5 ಸಾವಿರ ರೂ. ಪಿಂಚಣಿ ಹಣ ಬಂದಿತ್ತು. ಅದನ್ನು ತನಗೆ ಕೊಡುವಂತೆ ತಾಯಿಯ ಬಳಿ ಕೇಳಿದ್ದ. ಇದಕ್ಕೆ ತಾಯಿ ನಿರಾಕರಿಸಿದಾಗ ರಾತ್ರಿ ಮನೆಗೆ ಕುಡಿದು ಬಂದು ತಾಯಿ ಮೇಲೆ ದೊಣ್ಣೆಯಿಂದ ಹಲ್ಲೆ ಮಾಡಿದ್ದಾನೆ. ಪರಿಣಾಮ ತಾಯಿ ಸ್ಥಳದಲ್ಲೇ  ಮೃತಪಟ್ಟಿದ್ದಾರೆ. ಬಳಿಕ ತಾಯಿಯ ಶವವನ್ನು ರಸ್ತೆಮೇಲೆ ಹಾಕಿ ಹೋಗಿದ್ದಾನೆ.


ಇದನ್ನು ನೋಡಿದ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಬಣಕಲ್ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments