Webdunia - Bharat's app for daily news and videos

Install App

ಬೇಸರವಾದಾಗ ಪ್ರಾದೇಶಿಕ ಆಯಕ್ತ ಟ್ವಿಟ್ ಮಾಡಿದ್ದೇನು ಗೊತ್ತಾ?

Webdunia
ಬುಧವಾರ, 17 ಅಕ್ಟೋಬರ್ 2018 (17:51 IST)
ಕಲಬುರ್ಗಿ ಪ್ರಾದೇಶಿಕ ಆಯುಕ್ತ, ಹೈದರಾಬಾದ್​​ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ(HKRDB) ಕಾರ್ಯದರ್ಶಿ ಸುಬೋದ್ ಯಾದವ್‌ ಅವರು ಕಚೇರಿಯಲ್ಲಿನ ಘಟನೆ ಬಗ್ಗೆ ಟ್ವಿಟ್ ಮಾಡುವ ಮೂಲಕ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಅಕ್ಟೋಬರ್ 15 ರಂದು ರಾತ್ರಿ 9.23ಕ್ಕೆ ಟ್ವೀಟ್ ಮಾಡಿರೋ ಸುಬೋದ್ ಯಾದವ್, ಇಂದು ಕಚೇರಿಯಲ್ಲಿ ಅತ್ಯಂತ ಕೆಟ್ಟ ದಿನ ಎದುರಿಸಿದೆ. ಕೆಲವು ಸಲ ನೀವು ಏನೇ ಮಾಡಿದರೂ‌ ಅದು ಗಣನೆಗೆ ಬರೋದಿಲ್ಲ. ಕೆಲವು ಅನಗತ್ಯ ವಿಚಾರಗಳಿಗೆ ಹೆಚ್ಚಿನ ಮಹತ್ವ ನೀಡಲಾಗುತ್ತೆ. ಹೋಗಲಿ ಬಿಡಿ ಅದೇ ಜೀವನ, ಸದಾ ಸಿಹಿಯಾಗಿರುವುದಿಲ್ಲ. ಯಾವುದಾದರೂ ಕೆಲಸದಲ್ಲಿ ಭಾವೋದ್ವೇಗದಿಂದ ತೊಡಗಿದಾಗ ಹೀಗಾದರೆ ನೋವಾಗುತ್ತದೆ ಎಂದು ಬರೆದುಕೊಂಡಿದ್ದಾರೆ.

ಸುಬೋದ್ ಯಾದವ್ ಅವರ ಟ್ವೀಟ್​​ಗೆ ಹಲವರು ಬೆಂಬಲ ನೀಡಿದ್ದು, ಸಾಂತ್ವನ ಹೇಳಿದ್ದಾರೆ.

ಇತ್ತೀಚೆಗಷ್ಟೇ ಕಲಬುರ್ಗಿ ಪ್ರಾದೇಶಿಕ ಆಯುಕ್ತ, HKRDB ಕಾರ್ಯದರ್ಶಿಯಾಗಿ ಸುಬೋದ್ ಯಾದವ್ ವರ್ಗಾವಣೆಯಾಗಿದ್ದರು. ಸುಬೋದ್ ಯಾದವ್ ದಕ್ಷತೆಗೆ ಹಾಗೂ ಪ್ರಾಮಾಣಿಕತೆಗೆ ಹೆಸರುವಾಸಿಯಾಗಿರೋ ಅಧಿಕಾರಿ. ವರ್ಗಾವಣೆ ವೇಳೆ ಸುಬೋದ್ ಯಾದವ್ ಟ್ವಿಟ್ಟರ್‌ನಲ್ಲಿ ಸಂತಸ ವ್ಯಕ್ತಪಡಿಸಿದ್ದರು. ಸದ್ಯ ಸುಬೋದ್ ಯಾದವ್‌ ಈ ರೀತಿ ಟ್ವೀಟ್ ಮಾಡಿರುವುದು ಹಲವು ಪ್ರಶ್ನೆಗಳನ್ನು ಹುಟ್ಟಿಹಾಕಿದ್ದು, ಟ್ವಿಟ್ಟರ್‌ನಲ್ಲಿ ಈ ಕುರಿತು ಭಾರಿ ಚರ್ಚೆ ಶುರುವಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments