Webdunia - Bharat's app for daily news and videos

Install App

ಪತ್ನಿ ಸುಂದರವಾಗಿದ್ದಾಳೆಂದು ಶಿಕ್ಷಕ ಪತಿ ಮಾಡಿದ್ದೇನು ಗೊತ್ತಾ?

Webdunia
ಶುಕ್ರವಾರ, 22 ಡಿಸೆಂಬರ್ 2017 (13:45 IST)
ಇಲ್ಲೊಬ‌್ಬ ಗೃಹಿಣಿಗೆಯ ಆಕೆಯ ಅಂದ–ಚಂದವೇ ಮುಳುವಾಗಿದ್ದು, ಪತ್ನಿಯ ಮೇಲೆ ಅನುಮಾನ ಪಡುತ್ತಿದ್ದ ಶಿಕ್ಷಕನಾಗಿರುವ ಪತಿಯೇ ಪತ್ನಿಯನ್ನು ಕೊಲೆ ಮಾಡಿದ್ದಾನೆ. ಈ ಘಟನೆ ಬಳ್ಳಾರಿಯಲ್ಲಿ ನಡೆದಿದೆ.
 
ಚೆನ್ನಗಿರಿಯ ಹೆಬ್ಬಾಳಗೇರಿಯ ನೇತ್ರಾವತಿಯೊಂದಿಗೆ ಒಂದು ವರ್ಷದ ಹಿಂದೆ ಮದುವೆ ಮಾಡಿಕೊಂಡಿದ್ದ ಹೂವಿನಹಡಗಲಿ ತಾಲೂಕಿನ ಕುಂಬಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪ್ರೌಢ ಶಾಲೆಯ ಶಿಕ್ಷಕ ನಾಗರಾಜ್ ಪತ್ನಿಯನ್ನು ನೇಣು ಬಿಗಿದು ನಂತರ ಹೃದಯಾಘಾತವೆಂದು ಬಿಂಬಿಸಲು ಹೋಗಿ ಸಿಕ್ಕಿಬಿದ್ದಿದ್ದಾನೆ.

ಪತ್ನಿ ಸುಂದರವಾಗಿದ್ದಾಳೆ, ಆಕೆಗೆ ಮೊಬೈಲ್ ನೀಡಿದರೆ ಬೇರೆಯವರ ಜೊತೆ ಮಾತನಾಡುತ್ತಾಳೆ ಎಂದು ಅನುಮಾನ ಪಡುತ್ತಿದ್ದ ಶಿಕ್ಷಕ ಹಡಗಲಿಯ ಇಸ್ಲಾಂಪೇಟೆಯ ಮನೆಯಲ್ಲಿ ಹಲ್ಲೆ ಮಾಡಿ ನೇಣು ಬಿಗಿದು ಕೊಲೆ ಮಾಡಿದ್ದಾನೆ. ನಂತರ ಪತ್ನಿಗೆ ಹೃದಯಾಘಾತವಾಗಿದೆ ಎಂದು ಬೀಗರಿಗೆ ಫೋನ್ ಮಾಡಿ ಕರೆಸಿದ್ದಾನೆ.

ನೇತ್ರಾವತಿಯ ಪೋಷಕರು ಅಳಿಯನ ಮನೆಗೆ ಬಂದು ನೋಡಿದಾಗ ಮಗಳನ್ನು ನೇಣು ಬಿಗಿದು ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ನಂತರ ರಾಜಿ ಮಾಡಿಸುವ ಪ್ರಯತ್ನ ನಡೆಸಿದ ನಾಗರಾಜ್ ರಾಜಿಯಾಗದ ಹಿನ್ನೆಲೆಯಲ್ಲಿ ತಲೆ ಮರೆಸಿಕೊಂಡಿದ್ದಾನೆ. ಹೂವಿನಹಡಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DK Shivakumar: ಆರ್ ಸಿಬಿ ಟೀಂ ಖರೀದಿ ಮಾಡಕ್ಕೆ ನಂಗೇನು ಹುಚ್ಚಾ video

Bengaluru Stampede: ದೇಶದಲ್ಲಿ ನಡೆದ ದುರಂತಕ್ಕೆಲ್ಲ ಸಿಎಂ, ಪ್ರಧಾನಿ ರಾಜೀನಾಮೆ ನೀಡಿದ್ದಾರಾ: ಸಿಎಂ ಸಿದ್ದರಾಮಯ್ಯ

ಸಿಎಂ ರಾಜೀನಾಮೆ ಬದಲು ಜಾತಿಗಣತಿ, ಇದು ಹೈಕಮಾಂಡ್ ಪ್ಲ್ಯಾನ್: ಛಲವಾದಿ ನಾರಾಯಣಸ್ವಾಮಿ

Siddaramaiah: ರಾಜ್ಯಪಾಲರನ್ನು ಫೋನ್ ನಲ್ಲಿ ನಾನೇ ಕರೆದಿದ್ದೆ: ಗೊತ್ತಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಸ್ಪಷ್ಟನೆ

Meghalaya Honeymoon Case: ನೂರಕ್ಕೆ ನೂರು ಇದು ಆಕೆಯೇ ಮಾಡಿದ್ದು: ಸೋನಮ್‌ ವಿರುದ್ಧ ಕೆಂಡಕಾರಿದ ಸಹೋದರ

ಮುಂದಿನ ಸುದ್ದಿ
Show comments