Webdunia - Bharat's app for daily news and videos

Install App

ಸಾಲದಿಂದ ಬೇಸತ್ತ ಯುವಕ ಸೇಲ್ ಗೆ ಇಟ್ಟದ್ದು ಏನು ಗೊತ್ತಾ?

Webdunia
ಶನಿವಾರ, 29 ಸೆಪ್ಟಂಬರ್ 2018 (15:38 IST)
ಸಾಲದಿಂದ ಬೇಸತ್ತಿರುವ ಯುವಕನೊಬ್ಬ ಮನುಕುಲ ನಾಚುವಂತಹ ಘಟನೆಗೆ ಮುಂದಾಗಿದ್ದಾನೆ.

ನನ್ನ ಕಿಡ್ನಿ ಸೇಲ್‌ಗಿದೆ ಎಂದು ಟೀ ಅಂಗಡಿ ಮುಂದೆ ಫಲಕ ಹಾಕಿರುವ ವಿಚಿತ್ರ ಘಟನೆ ಮಂಡ್ಯ ನಗರದಲ್ಲಿ ನಡೆದಿದೆ. 26 ವರ್ಷದ ಯುವಕ ವಿನೋದ್ ಕುಮಾರ್ ಮಂಡ್ಯ ನಗರದ ಫ್ಯಾಕ್ಟರಿ ಸರ್ಕಲ್ ಬಳಿ, ಮಧುರ ಟೀ ಸ್ಟಾಲ್ ಎಂಬ ಅಂಗಡಿ ಇಟ್ಟುಕೊಂಡಿದ್ದಾನೆ. ಮಂಡ್ಯ ತಾಲೂಕಿನ ತಗ್ಗಹಳ್ಳಿ ಗ್ರಾಮದಲ್ಲಿ ವಾಸವಾಗಿರುವ ವಿನೋದ್ ಕುಮಾರ್ ಮನೆ ಕಟ್ಟಿಸುವುದು ಸೇರಿದಂತೆ ಹಲವಾರು ಕಾರಣಗಳಿಗೆ ಸಾಲ ಮಾಡಿಕೊಂಡಿದ್ದಾನಂತೆ. ತಾನು ಮಾಡಿಕೊಂಡಿರುವ ಸಾಲಕ್ಕೆ ಬಡ್ಡಿ ಕಟ್ಟಲೂ ಕಷ್ಟವಾಗಿದೆ. ಹಣ ಕೊಟ್ಟವರಿಗೆ ಹಣ ವಾಪಸ್ ಕೊಡುವುದು ನ್ಯಾಯ. ಹೀಗಾಗಿ ನಮ್ಮ ಜಮೀನನ್ನು ಅಡವಿಟ್ಟು ಸಾಲ ತೀರಿಸೋಣ ಅಂತಿದ್ದೇನೆ. ಆದರೆ ನಾಡ ಕಚೇರಿಯಲ್ಲಿ ಜಮೀನಿನ ಸ್ಕೆಚ್ ಕೊಡಲು ಲಂಚ ಕೇಳುತ್ತಿದ್ದಾರೆ. ಲಂಚ ಕೊಡಲು ನನ್ನ ಬಳಿ ಹಣವಿಲ್ಲ‌. ಹೀಗಾಗಿ ನಾನು ನನ್ನ ಕಿಡ್ನಿ ಸೇಲ್ ಮಾಡುವ ನಿರ್ಧಾರಕ್ಕೆ ಬಂದಿದ್ದಾನೆ ಎಂದಿದ್ದಾನೆ.

ಕಿಡ್ನಿ ಬೇಕಾದವರು ನನಗೆ ಹಣ ನೀಡಿ ಕಿಡ್ನಿ ಕೊಂಡುಕೊಳ್ಳಿ ಎಂದು ವಿನೋದ್ ಕುಮಾರ್ ತನ್ನ ಟೀ ಅಂಗಡಿ ಮುಂದೆ ಬರೆದು ಚೀಟಿ ಅಂಟಿಸಿದ್ದಾನೆ. ಇನ್ನು ವಿನೋದ್ ಕುಮಾರ್ ಕಿಡ್ನಿ ಮಾರಾಟಕ್ಕಿದೆ ಎಂದು ಬರೆದು ಅಂಟಿಸಿರುವುದನ್ನು ನೋಡಿದ ಸ್ಥಳೀಯರು, ಈ ರೀತಿ ಮಾಡುವುದು ತಪ್ಪು ಎಂದು ಬುದ್ದಿ ಹೇಳಿದ್ದಾರೆ. ಆದರೆ ಯಾರ ಬುದ್ದಿ ಮಾತಿಗೂ ಕಿವಿಗೊಡದ ವಿನೋದ್ ಕುಮಾರ್, ಸಾಲಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಳ್ಳಲು ನನಗೆ ಇಷ್ಟವಿಲ್ಲ. ಹೀಗಾಗಿ ಕಿಡ್ನಿ ಮಾರಾಟ ಮಾಡಿ ಸಾಲ ತೀರಿಸಲು ಮುಂದಾಗಿದ್ದೇನೆ ಅಂತಿದ್ದಾನೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚುನಾವಣಾ ರಾಜಕಾರಣಕ್ಕೆ ಸೋಮಣ್ಣ ನಿವೃತ್ತಿ: ದೇವರೇ ಹೇಳಿದರೂ ಸ್ಪರ್ಧಿಸಲ್ಲ ಎಂದು ಕೇಂದ್ರ ಸಚಿವ

Karnataka Weather: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್: ಏಲ್ಲೆಲ್ಲಿ ಮಳೆ ಸಾಧ್ಯತೆ ಇಲ್ಲಿದೆ ಮಾಹಿತಿ

ಟ್ರಾಫಿಕ್‌ ಫೈನ್‌ ಆಫರ್‌ಗೆ ರಾಜಧಾನಿಯಲ್ಲಿ ಭರ್ಜರಿ ರೆಸ್ಪಾನ್ಸ್‌: ಮೊದಲ ದಿನ ವಸೂಲಿಯಾದ ದಂಡವೆಷ್ಟು ಗೊತ್ತಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಮುಂದಿನ ಸುದ್ದಿ
Show comments