Webdunia - Bharat's app for daily news and videos

Install App

ಶಾಸಕ ಹೆಚ್ ವೈ ಮೇಟಿ ಅವರ ವಿರುದ್ದ ಫೇಸ್‍ಬುಕ್‍ ಪೋಸ್ಟ್ ನಲ್ಲಿ ಈ ಯುವಕ ಹಾಕಿದ್ದೇನು ಗೊತ್ತಾ...?

Webdunia
ಶುಕ್ರವಾರ, 9 ಫೆಬ್ರವರಿ 2018 (10:39 IST)
ಬಾಗಲಕೋಟೆ : ಶಾಸಕ ಹೆಚ್ ವೈ ಮೇಟಿಯವರನ್ನು ಬಾಗಲಕೋಟೆಯ ಹರನಸಿಕಾರಿ ಕಾಲೋನಿಯಲ್ಲಿನ ಚರ್ಚ್ ನ ಕಾರ್ಯಕ್ರಮಕ್ಕೆ ಆಹ್ವಾನಿಸಲಾದ ಹಿನ್ನಲೆಯಲ್ಲಿ , ಅವರ ಬಗ್ಗೆ ಭಾವಚಿತ್ರ ಸಮೇತ ಅವಹೇಳನಕಾರಿಯಾಗಿ ಬರೆದು ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿದ ಯುವಕನೋರ್ವನನ್ನು ಬಾಗಲಕೋಟೆ ಪೊಲೀಸರು ಬಂಧಿಸಿದ್ದಾರೆ.


ಮೂಲತಃ ಬಾಗಲಕೋಟೆಯ ಡ್ಯಾನಿಯಲ್ ನ್ಯೂಟನ್ ಎಂಬ ಯುವಕ, ಹವ್ಯಾಸಿ ಹಾವು ಹಿಡಿಯುವ ವ್ಯಕ್ತಿಯಾಗಿದ್ದು ಸ್ನೇಕ್ ಡ್ಯಾನಿಯಲ್ ಎಂದೇ ಹೆಸರುವಾಸಿಯಾಗಿರುವ ಈತ ತನ್ನ ಫೇಸ್‍ಬುಕ್ ನಲ್ಲಿ ‘’ಇಂತವರನ್ನು ಮಂದಿರ, ಮಸೀದಿ ಚರ್ಚ್‍ಗಳ ಧಾರ್ಮಿಕ ಕಾರ್ಯಕ್ಕೆ ಆಹ್ವಾನಿಸೋದು ಸರಿಯಲ್ಲ. ಹಾಗಂತ ನನಗೆ ಅವರ ಬಗ್ಗೆ ವೈಯಕ್ತಿಕ ದ್ವೇಷವಿಲ್ಲ. ಸಮಾಜ ತಲೆತಗ್ಗಿಸುವಂತ ಕೃತ್ಯವೆಸಗಿದ ಇಂತವರನ್ನು ಧಾರ್ಮಿಕ ಸ್ಥಳಕ್ಕೆ ಆಹ್ವಾನಿಸಿ, ಪವಿತ್ರ ಸ್ಥಳವನ್ನು ಅಪವಿತ್ರ ಮಾಡಬೇಡಿ ಎಂಬ ಕಳಕಳಿ’’ ಎಂದು ಬರೆದು ಹೆಚ್ ವೈ ಮೇಟಿ ಅವರಿಗೆ ಅವಹೇಳನ ಮಾಡಿದ್ದಾನೆ.


ಇದನ್ನು ಗಮನಿಸಿದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮೇಟಿ ಬೆಂಬಲಿಗರು ಪೊಲೀಸರಿಗೆ ತಿಳಿಸಿದ್ದರಿಂದ ಆತನನ್ನು ಪೊಲೀಸರು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments