Select Your Language

Notifications

webdunia
webdunia
webdunia
webdunia

ಅನೈತಿಕ ಸಂಬಂಧಕ್ಕೆ ಆತ ಮಾಡಿದ್ದೇನು ಗೊತ್ತಾ?

ಅನೈತಿಕ ಸಂಬಂಧ
ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಆತ ಮಾಡಬಾರದ ಕೆಲಸ ಮಾಡಿ ಈಗ ಕಂಬಿ ಎಣಿಸುವಂತಾಗಿದೆ.

ಅನೈತಿಕ ಸಂಬಂಧ ಹಿನ್ನಲೆಯಲ್ಲಿ ಕೊಲೆ ಮಾಡಿದ್ದ ಆರೋಪಿಯನ್ನು ಪೊಲೀಸರು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

ಕಲಬುರಗಿ ನಗರದ ನೆಹರು ಗಂಜ್ ನ ಎಪಿಎಂಸಿ ಪ್ರದೇಶದಲ್ಲಿ ಸಂಜೀವನಗರದ ನಾಗರಾಜ ಹನಮಂತ ಶಿಂಧೆ (26) ಎಂಬ ಯುವಕನ ಕೊಲೆ ಆಗಿತ್ತು. ಈ ಪ್ರಕರಣ ಜಾಡು ಹಿಡಿದು ತನಿಖೆ ಕೈಗೊಂಡ ಪೊಲೀಸರು ಬಸವನಗರದ ಶಿವಕುಮಾರ ತಿಪ್ಪಣ್ಣ ಮುದ್ನಾಳಕರ್ ( 30) ಎಂಬಾತನನ್ನು ಬಂಧನ ಮಾಡಿದ್ದಾರೆ.

ಅನೈತಿಕ ಸಂಬಂಧ ಹಿನ್ನಲೆಯಲ್ಲಿ ನಾಗರಾಜ ಶಿಂಧೆಯನ್ನು ರಾಡ್ ನಿಂದ ಹೊಡೆದು ಕೊಲೆ ಮಾಡಲಾಗಿತ್ತು. ಈ ಕುರಿತು ಚೌಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಚೌಕ್ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಶಿವಕುಮಾರ ಮುದ್ನಾಳಕರ್ ನನ್ನು ಬಂಧಿಸಿದ್ದಾರೆ.




Share this Story:

Follow Webdunia kannada

ಮುಂದಿನ ಸುದ್ದಿ

ಪಿಎಂ-ಕಿಸಾನ್ ಯೋಜನೆ: ರೈತರು ಆರ್ಥಿಕ ನೆರವಿಗೆ ಇದನ್ನು ಮಾಡಲೇಬೇಕು