Webdunia - Bharat's app for daily news and videos

Install App

ತನ್ನ ಇಬ್ಬರು ಹೆಣ್ಣು ಮಕ್ಕಳಿಗೆ ತಂದೆಯಾಗುತ್ತೇನೆ ಎಂದವನು ಕೊನೆಗೆ ಮಾಡಿದ್ದೇನು ಗೊತ್ತಾ

Sampriya
ಭಾನುವಾರ, 25 ಆಗಸ್ಟ್ 2024 (11:41 IST)
ಬೆಂಗಳೂರು: ಪತ್ನಿ ಇಲ್ಲದ ವೇಳೆ ಮಲತಂದೆ ಇಬ್ಬರು ಹೆಣ್ಣು ಮಕ್ಕಳನ್ನು ಬರ್ಬರವಾಗಿ ಕೊಂದು ಘಟನೆ  ಅಮೃತಹಳ್ಳಿಯ ಕಾವೇರಿ ಲೇಜೌಟ್‌ನಲ್ಲಿ ಶನಿವಾರ ನಡೆದಿದೆ. ಆರೋಪಿಯನ್ನು ಉತ್ತರ ಪ್ರದೇಶದ ಸುಮಿತ್ ಎಂದು ಗುರುತಿಸಲಾಗಿದೆ.

ಪತ್ನಿ ಗಾರ್ಮೆಂಟ್ಸ್ ಕೆಲಸಕ್ಕೆ ಹೋಗಿದ್ದಾಗ ಪತಿ ಸಮಿತ್ ಮನೆಯಲ್ಲಿದ್ದ ಹೆಣ್ಣು ಮಕ್ಕಳನ್ನು ಬರ್ಬರವಾಗಿ ಕೊಚ್ಚಿ ಕೊಂದು, ಎಸ್ಕೇಪ್‌ ಆಗಿದ್ದಾನೆ.  ವಿಚಾರ ಗೊತ್ತಾಗುತ್ತಿದ್ದಂತೆ ಅಮೃತಹಳ್ಳಿ ಪೊಲೀಸರು ಸ್ಥಳಕ್ಕೆ ಬಂದು ಮೃತದೇಹಗಳನ್ನು ಅಂಬೇಡ್ಕರ್ ಆಸ್ಪತ್ರೆಗೆ ರವಾನೆ ಮಾಡಿದ್ದರು. ತಾಯಿ ಅನಿತಾಳಿಂದ ದೂರು ಪಡೆದು ಆರೋಪಿಗಾಗಿ ಬಲೆ ಬೀಸಿದ್ದಾರೆ.

ಅನಿತಾ ಅವರು ಒಂಬತ್ತು ವರ್ಷಗಳ ಹಿಂದ ಕೆಲ ವೈಯಕ್ತಿಕ ಕಾರಣಗಳಿಂದ ಗಂಡನಿಂದ ವಿಚ್ಚೇದನ ಪಡೆದು ದೂರವಾಗಿದ್ದರು. ಇವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದರು. ಈ ವೇಳೆ ಅನಿತಾ ಅವರಿಗೆ ಉತ್ತರಪ್ರದೇಶ ಮೂಲದ ಸುಮಿತ್ ಪರಿಚಯವಾಗಿದ್ದಾನೆ. ಮಕ್ಕಳಿಬ್ಬರನ್ನು ತನ್ನ ಮಕ್ಕಳಂತೆ ನೋಡಿಕೊಳ್ಳುತ್ತೇನೆಂದು ಭರವಸೆ ನೀಡಿ ಅನಿತಾಳನ್ನು ಮದುವೆಯಾಗಿದ್ದಾನೆ.

ಅನಿತಾ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದ, ಸುಮಿತ್ ಡೆಲಿವರಿ ಬಾಯ್‌ ಆಗಿ ಕೆಲಸ ಮಾಡುತ್ತಿದ್ದ.ಈಚೆಗೆ ಇಬ್ಬರು ಹೆಣ್ಣು ಮಕ್ಕಳನ್ನು  ನೋಡುತ್ತಿದ್ದರೆ ಸುಮಿತ್‌ಗೆ ಆಗುತ್ತಿರಲಿಲ್ಲ. ಇದೇ ಕೋಪದಲ್ಲೇ ಹೆಂಡತಿ ಇಲ್ಲದ ವೇಳೆ ಇಬ್ಬರು ಮಕ್ಕಳನ್ನು ಬರ್ಬರವಾಗಿ ಕೊಂದಿದ್ದಾನೆ.

ಸದ್ಯ ಅಮೃತಹಳ್ಳಿ‌ ಪೊಲೀಸರು ಕೊಲೆ ಕೇಸ್ ದಾಖಲಿಸಿದ್ದು, ಮನೆಯ ಸುತ್ತಮುತ್ತ ಇರೋ ಸಿಸಿ ಕ್ಯಾಮರಾಗಳ ಪರಿಶೀಲನೆ ಮಾಡ್ತಾ ಇದ್ದಾರೆ. ಎಸ್ಕೇಪ್ ಆಗಿರುವ ಸುಮೀತ್‌ಗಾಗಿ ನಾಲ್ಕು ವಿಶೇಷ ತಂಡಗಳಿಂದ ಹುಡುಕಾಟ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments