Webdunia - Bharat's app for daily news and videos

Install App

ವಯನಾಡು ದುರಂತ ಬಗ್ಗೆ ಹೇಳಿದ್ದ ಕೋಡಿಶ್ರೀ ರಾಜ್ಯದ ಬಗ್ಗೆ ಸ್ಫೋಟಕ ಭವಿಷ್ಯ

Sampriya
ಮಂಗಳವಾರ, 30 ಜುಲೈ 2024 (19:48 IST)
Photo Courtesy X
ಬೆಳಗಾವಿ: ನಾನು 20 ದಿನಗಳ ಹಿಂದೆಯೇ ವಯನಾಡಿನಲ್ಲಿ ಭೀಕರ ದುರಂತ ಸಂಭವಿಸುತ್ತದೆ ಎಂದು ಭವಿಷ್ಯ ನುಡಿದಿದ್ದೆ ಎಂದು  ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ  ಹೇಳಿದರು.

ಅವರು ವಯನಾಡು ಭೂಕುಸಿತ ಸಂಬಂಧ ಇಂದು ಬೆಳಗಾವಿಯ ರಾಮತೀರ್ಥ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು.  ಕಳೆದ ಇಪ್ಪತ್ತು ದಿನಗಳ ಹಿಂದೆಯೇ ವಯನಾಡಿನಲ್ಲಿ ದುರಂತ ಸಂಭವಿಸುತ್ತದೆ.  ಮಳೆಯಿಂದಾಗಿ ಗುಡ್ಡ ಕುಸಿದು, ಜನರ ಸಾವು ಆಗುತ್ತದೆ. ಅದಲ್ಲದೆ ರೋಗ ರುಜಿನಗಳು ಹೆಚ್ಚಾಗುತ್ತದೆ . ಇದು ಜಾಗತಿಕವಾಗಿಯೂ ಕೆಲ ರಾಜ್ಯಗಳಲ್ಲೂ ಹೀಗೇ ಸಂಭವಿಸುತ್ತುದೆ ಎಂದು ಹೇಳಿದ್ದೆ ಎಂದಿದ್ದಾರೆ.

ಇನ್ನೂ ಪ್ರಸ್ತುತ ಮಳೆಯಾಗುತ್ತಿವ ಬಗ್ಗೆ ಹೇಳಿದ ಅವರು, ಅಮಾವಾಸ್ಯೆವರೆಗೆ ಮಳೆ ಜೋರಾಗಿ ಸುರಿಯಲಿದೆ. ಬಳಿಕ ಬೇರೆ ಭಾಗಕ್ಕೆ ಹೋಗುತ್ತೆ. ಇದು ಕ್ರೋಧಿನಾಮ ಸಂವತ್ಸರ, ಕ್ರೋಧಿ ಅಂದ್ರೆ ಸಿಟ್ಟು ಇದರಲ್ಲಿ ಒಳ್ಳೆಯದ್ದೂ ಇದೆ, ಕೆಟ್ಟದ್ದೂ ಇದೆ. ಈ ಪೈಕಿ ಕೆಟ್ಟದ್ದೇ ಜಾಸ್ತಿ ಇರುತ್ತೆ. ಈ ಪ್ರಾಕೃತಿಕ ದೋಷ ಮುಂದುವರಿಯುತ್ತೆ. ಮುಂದೆ ಅನಿಷ್ಠ ಜಾಸ್ತಿ ಇದೆ, ಕತ್ತಲು ಬೆಳಕು ಎರಡು ಇರುತ್ತೆ ಅದರಲ್ಲಿ ಕತ್ತಲು ಜಾಸ್ತಿ ಇರುತ್ತೆ ಎಂದು ಸ್ವಾಮೀಜಿ  ಭವಿಷ್ಯ ನುಡಿದರು.

ಅದಲ್ಲದೆ ರಾಜ್ಯದಲ್ಲಿ ಜಲಕಂಟಕ ಮತ್ತು ಪ್ರಕೃತಿ ವಿಕೋಪ ಮುಂದುವರಿಯಲಿದೆ. ರಾಜ್ಯದಲ್ಲಿ ಲಾಭಕ್ಕಿಂತ ಹಾನಿ ಜಾಸ್ತಿಯಾಗಲಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments