ಮೀಟರ್ ಬಡ್ಡಿ ದಂಧೆ ಕೋರರು ಮಾಡಿದ್ದೇನು ಗೊತ್ತಾ?

Webdunia
ಸೋಮವಾರ, 27 ಆಗಸ್ಟ್ 2018 (19:32 IST)
ಬಡ್ಡಿ ವ್ಯವಹಾರದಲ್ಲಿ ಮಧ್ಯಸ್ಥಿಕೆ ವಹಿಸಿದ ವ್ಯಕ್ತಿಯನ್ನು‌ ಸಿನಿಮೀಯ ರೀತಿಯಲ್ಲಿ ಅಪಹರಿಸಿ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಬೆಂಗಳೂರು ಗ್ರಾಮಾಂತರ ಹೊಸಕೋಟೆ ತಾಲೂಕಿನಲ್ಲಿ  ಈ ಘಟನೆ ನಡೆದಿದೆ. ನಾರಾಯಣಸ್ವಾಮಿ (32) ಹಲ್ಲೆಗೊಳಗಾದ ವ್ಯಕ್ತಿ. ಹೊಸಕೋಟೆ ತಾಲೂಕಿನ ಕೆ.ಮುತ್ಸಂದ್ರ ಗ್ರಾಮದ ನಿವಾಸಿ ನಾರಾಯಣಸ್ವಾಮಿ ಯನ್ನು ಕುಂಬಳಹಳ್ಳಿ ಗ್ರಾಮದ ನಿವಾಸಿಗಳಾದ ಪ್ರಕಾಶ್, ಶಶಿ ಹಾಗೂ ಇಬ್ಬರು ಸಹಚರರು ನಿನ್ನೆ ರಾತ್ರಿ 10 ಗಂಟೆಗೆ    ಕೆ.ಮುತ್ಸಂದ್ರ ಗ್ರಾಮದ ಗೇಟ್ ಬಳಿಯ ನಾರಾಯಣಸ್ವಾಮಿ ಹೋಟೆಲ್ ಬಳಿ ಹಲ್ಲೆ ನಡೆಸಿ ಅಲ್ಟೋ ಕಾರಿನಲ್ಲಿ ಅಪಹರಿಸಿಕೊಂಡು ಹೋಗಿದ್ದಾರೆ.
ಬೆಂಗಳೂರು ಪೂರ್ವ ತಾಲೂಕಿನ ಕಾಡುಗೋಡಿ ಸಮೀಪದ ಬನಹಳ್ಳಿ ಬಳಿ ಕರೆತಂದು ಕೊಲೆ ಮಾಡಲು ಯತ್ನಿಸಿದಾಗ  ಸಿನಿಮೀಯ ರಿತಿಯಲ್ಲಿ ಅಪಹರಣಕಾರರಿಂದ ತಪ್ಪಿಸಿಕೊಂಡಿದ್ದಾರೆ. ಅಲ್ಲಿಂದ ಬಂದ ನಾರಾಯಣಸ್ವಾಮಿ, ಖಾಸಗಿ ಶಾಲೆಯೊಂದರ ಸೆಕ್ಯೂರಿಟಿ ಗಾರ್ಡ್ ನ ಮೊಬೈಲ್ ನಿಂದ ತಮ್ಮ ಅಣ್ಣನಿಗೆ ಕಾಲ್ ಮಾಡಿ ಕರೆಸಿಕೊಂಡು ಪ್ರಾಣಾಪಾಯದಿಂದ ಪಾರಾಗಿ ಹೊಸಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಸಂಬಂಧ ಸೂಲಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಲೆ ಮರೆಸಿಕೊಂಡಿರುವ ಅರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಈಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಂಪತಿ ದಾರುಣ ಸಾವು

ಖಮೇನಿ ಹತ್ಯೆಯನ್ನು ಖಂಡಿಸಿ, ಟ್ರಂಪ್ ವಿರುದ್ಧ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ

ಖಮೇನಿ ಹತ್ಯೆ ಖಂಡಿಸಿ ಇಸ್ರೇಲ್‌ ಯುಎಸ್ ವಿರುದ್ಧ ಗುಡುಗಿದ ರಷ್ಯಾ ಅಧ್ಯಕ್ಚ ಪುಟಿನ್

ಖಮೇನಿ ಹತ್ಯೆಗೆ ಇದೀಗ ಪ್ರತೀಕಾರ ತೀರಿಸಿಕೊಳ್ಳುವ ಸಮಯ: ಇರಾನ್ ಅಧ್ಯಕ್ಷ

ಲಕ್ಷಾಂತರ ಮಂದಿ ಕಾರ್ಯಕರ್ತರು ನೋವಿನಲ್ಲೇ ದಿನ ಕಳೆಯುತ್ತಿದ್ದಾರೆ: ಈಶ್ವರಪ್

ಮುಂದಿನ ಸುದ್ದಿ
Show comments