Webdunia - Bharat's app for daily news and videos

Install App

ಶಾಸಕ ಸತೀಶ್ ಜಾರಕಿಹೊಳಿ ಹೇಳ್ತಿರೋದೇನು ಗೊತ್ತಾ?

Webdunia
ಶುಕ್ರವಾರ, 14 ಸೆಪ್ಟಂಬರ್ 2018 (14:49 IST)
ಕಾಂಗ್ರೆಸ್ ಹೈಕಮಾಂಡ್ ನಿಂದ ಜಾರಕಿಹೊಳಿ ಸಹೋದರರಿಗೆ ವಾರ್ನಿಂಗ್ ವಿಚಾರ ಬೆಳಗಾವಿಯಲ್ಲಿ ಶಾಸಕ ಸತೀಶ್ ಜಾರಕಿಹೊಳಿ ವ್ಯಂಗ್ಯವಾಡಿದ್ದಾರೆ.

ಎಲ್ಲಿ ಹೊರಟಿದಕ್ಕೆ ವಾರ್ನಿಂಗಾ ಅಥವಾ ಹೋಗದಕ್ಕೆ ವಾರ್ನಿಂಗಾ..? ಯಾತಕ್ಕೆ ವಾರ್ನಿಂಗ್ ಅಂತ ಮರು ಪ್ರಶ್ನೆ ಮಾಡಿರುವ ಸತೀಶ್ ಜಾರಕಿಹೊಳಿ, ಈ ಪಾರ್ಟಲ್ಲಿ ನಾನು ಇಲ್ಲವೇ ಇಲ್ಲ. ನಮ್ ಪಾರ್ಟ್ ಬೇರೆ ಇದೆ. ನಾವು ಅಸಮಾಧಾನ ಆಗುವ ಅವಶ್ಯಕತೆ ಇಲ್ಲ. ನಮಗೆ ಯಾರೂ ವಾರ್ನಿಂಗ್ ಮಾಡುವ ಪ್ರಶ್ನೆ ಉದ್ಭವಿಸಲ್ಲ ಎಂದಿದ್ದಾರೆ.

ಕಾಂಗ್ರೆಸ್ ಬಿಡುವ ವಿಚಾರದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಅದರಲ್ಲಿ ನಮ್ಮ ಪಾತ್ರವಿಲ್ಲ. ರಮೇಶ್ ಜಾರಕಿಹೊಳಿ ಇರಬಹುದು. ಮತ್ಯಾರೊ ಬೇರೆಯವರು ಇರಬಹುದು. ಆಪರೇಷನ್ ಕಮಲ ಹೊಸದೇನಲ್ಲ. ಡೇ ಒನ್ ನಿಂದ ನಾಲ್ಕು ತಿಂಗಳಿಂದಲೂ ಅದು ಜಾರಿಯಲ್ಲಿದೆ. ಆದ್ರೆ ಸದ್ಯಕ್ಕೆ ಅಂತಹ ವಾತಾವರಣ ಇಲ್ಲ ಎಂದರು. ಅಸಮಾಧಾನ ಇರೋದು ನಿಜ. ನಮ್ಮ ಅಧ್ಯಕ್ಷರಿಗೆ ಎರಡು ಸಾರಿ ಭೇಟಿಯಾಗಿದ್ದೇವೆ. ವಿಷಯಗಳನ್ನು ಹೇಳಿದ್ದೇವೆ. ಹಬ್ಬ ಮುಗಿದ ಮೇಲೆ ಇನ್ನೊಮ್ಮೆ ಕುಡೋಣ ಎಂದಿದ್ದಾರೆ ಎಂದರು. 

ಬೆಳಗಾವಿ ಜಿಲ್ಲೆ ವಿಭಜನೆ ವಿಚಾರ ಬಗ್ಗೆ ಮಾತನಾಡಿದ ಅವರು, ಕಳೆದ ಇಪ್ಪತ್ತು ವರ್ಷಗಳ ಡಿಮ್ಯಾಂಡ್ ಇದೆ. ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಮಾಡಬೇಕು ಅಂತಲ್ಲ. ನಾವು ಕಳೆದ ವರ್ಷ ಇದನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಜಿಲ್ಲೆ ವಿಭಜನೆ ಮಾಡುವ ಅವಶ್ಯಕತೆ ಇದೆ. ಮಾಡಲೇ ಬೇಕು. ಅಭಿವೃದ್ಧಿ ದೃಷ್ಟಿಯಿಂದ ಅವಶ್ಯಕವಾಗಿದೆ ಎಂದರು.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments