Webdunia - Bharat's app for daily news and videos

Install App

ಗೋವಿಜ್ಞಾನ ತರಬೇತಿ ಶಿಬಿರದಲ್ಲಿ ಏನೇನಿರುತ್ತೆ ಗೊತ್ತಾ?

Webdunia
ಬುಧವಾರ, 26 ಫೆಬ್ರವರಿ 2020 (18:26 IST)
ಗೋವಿಜ್ಞಾನ ಸಾವಯವ ಕೃಷಿ ಮತ್ತು ಸ್ವಾವಲಂಬಿ ಗ್ರಾಮ ನಿರ್ಮಾಣ ಕುರಿತಾದ ಮೂರು ದಿನಗಳ ಉಚಿತ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದೆ.

ಫೆಬ್ರವರಿ 28 ರಿಂದ ಮಾರ್ಚ್ 1 ರವರೆಗೆ ಕಲಬುರಗಿ ತಾಲೂಕಿನ ಮುತ್ಯಾನ ಬಬಲಾದದ ಚನ್ನವೀರೇಶ್ವರ ಬೆಟ್ಟದಲ್ಲಿ ನಡೆಯಲಿದೆ.

ಪ್ರತಿದಿನ ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ತರಬೇತಿ ನಡೆಯಲಿದೆ. ನಾಂದೇಡದ ರಾಜೇಂದ್ರ ದೇವಣಿಕರ್ ಅವರೊಂದಿಗೆ ಗೋಪಾಲಕ ಸುಧೀಂದ್ರ ದೇಶಪಾಂಡೆ ಪ್ರಶಿಕ್ಷಣ ನೀಡಲಿದ್ದಾರೆ.

ಗೋ ಆಧಾರಿತ ಕಾಂಪೋಸ್ಟ್ ಗೊಬ್ಬರ ತಯಾರಿಕೆ, ಸಾವಯವ ಕೀಟ ನಾಶಕ, ನೈಸರ್ಗಿಕ ಸಾಬೂನು, ಗೋಮೂತ್ರ ಮುಲಾಮು, ದಂತ ಮಂಜನ, ಧೂಪಬತ್ತಿ, ಫಿನಾಯಿಲ್ ಸೇರಿದಂತೆ 30 ವಸ್ತುಗಳ ತಯಾರಿಕೆ ಬಗ್ಗೆ ಪ್ರಾತ್ಯಕ್ಷಿಕೆ ನೀಡಲಾಗುತ್ತದೆ.
ಶಿಬಿರಾರ್ಥಿಗಳಿಗೆ ಊಟ, ವಸತಿ ಸೌಲಭ್ಯವಿದೆ. ಆಸಕ್ತರು ನೋಂದಣಿಗಾಗಿ 8861217484 ಸಂಪರ್ಕಿಸಬಹುದಾಗಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments