Webdunia - Bharat's app for daily news and videos

Install App

ಸಿದ್ಧಗಂಗಾ ಶ್ರೀಗಳ ಕ್ರಿಯಾಸಮಾಧಿಯ ಹೇಗಿದೆ ಗೊತ್ತಾ?

Webdunia
ಮಂಗಳವಾರ, 22 ಜನವರಿ 2019 (09:50 IST)
ತುಮಕೂರು : ನಡೆದಾಡುವ ದೇವರು ಎಂದೇ ಪ್ರಸಿದ್ಧರಾದ ಶಿವಕುಮಾರ ಸ್ವಾಮೀಜಿ ಅವರು ಸೋಮವಾರ ಲಿಂಗೈಕ್ಯರಾದ ಹಿನ್ನಲೆಯಲ್ಲಿ ಇಂದು ಸಂಜೆ 4 ಗಂಟೆ 30 ನಿಮಿಷಕ್ಕೆ ಕ್ರಿಯಾ ಸಮಾಧಿ ನಡೆಯಲಿದೆ.


ಶ್ರೀಗಳು ಲಿಂಗೈಕ್ಯರಾಗಲಿರುವ ಗರ್ಭಗುಡಿಯಲ್ಲಿ 12 ಅಡಿ ಆಳದ ಸಮಾಧಿ ಗುಂಡಿ ತೆಗೆಯಲಾಗಿದೆ. ಶ್ರೀಗಳ ಕ್ರಿಯಾ ಸಮಾಧಿ ನಡೆಯಲಿರುವ ಭವನವನ್ನು ತಳಿರು ತೋರಣ, ಹೂಗಳಿಂದ ಅಲಂಕರಿಸಲಾಗುತ್ತಿದೆ. ಶ್ರೀಗಳು ಈ ಸ್ಥಳದಲ್ಲಿ ಲಿಂಗೈಕ್ಯವಾಗಿ ಲಿಂಗದ ರೂಪದಲ್ಲಿ ದರ್ಶನ ನೀಡಲಿದ್ದಾರೆ.  


ಗದ್ದುಗೆ ನಾಲ್ಕು ಮೂಲೆಗಳಲ್ಲಿ ಕರಡಿಗೆಯ ಚಿತ್ರವನ್ನು ಕೆತ್ತಲಾಗಿದೆ. ಈ ಭವನ ಸಂಪೂರ್ಣ ಅಮೃತಶಿಲೆಯಿಂದ ನಿರ್ಮಾಣಗೊಂಡಿದೆ. ಗರ್ಭಗುಡಿ ಶಿಲಾ ಬಾಗಿಲ ಮೇಲೆ 26 ದೇವರನ್ನು ಕೆತ್ತಲಾಗಿದೆ. ಬಾಗಿಲ ಎಡ, ಬಲ ಭಾಗದಲ್ಲಿ ಅಷ್ಟ ದಿಕ್ಪಾಲಕರು, ಸಿದ್ದಗಂಗಾ ಮಠದ ದೇವರಾದ ಸಿದ್ದಲಿಂಗೇಶ್ವರ ಸ್ವಾಮೀಜಿ, ಬಸವಣ್ಣ, ಲಿಂಗೈಕ್ಯ ಗೋಸಲ ಸಿದ್ದೇಶ್ವರ, ಉದ್ದಾನ ಶಿವಯೋಗಿ, ಯಡಿಯೂರು ಸಿದ್ದಲಿಂಗೇಶ್ವರ, ಅಟವಿ ಶಿವಯೋಗಿ, ಬೇಡರ ಕಣ್ಣಪ್ಪ, ಅಕ್ಕಮಹಾದೇವಿ ಸೇರಿದಂತೆ 26 ಮೂರ್ತಿಗಳನ್ನು ಕೆತ್ತಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments