Webdunia - Bharat's app for daily news and videos

Install App

ಕಾರಿನ ಗಾಜು ಒಡೆದು ಕದ್ದದ್ದು ಏನು ಗೊತ್ತಾ?

Webdunia
ಗುರುವಾರ, 10 ಜನವರಿ 2019 (15:22 IST)
ಯುವಕರ ಗುಂಪೊಂದು ಕಾರಿನ ಗಾಜು ಒಡೆದು ಅಲ್ಲಿದ್ದ ಬೆಲೆ ಬಾಳುವ ವಸ್ತುಗಳನ್ನು ಎಗರಿಸಿದ್ದಾರೆ.
ಕಾರಿನಲ್ಲಿದ್ದ ಲ್ಯಾಪ್ ಟಾಪ್, ಪಾಸ್ಪೋರ್ಟ್ಗಳನ್ನು ದುಷ್ಕರ್ಮಿಗಳು ಕಳವು ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಬಸವನಗುಡಿಯಲ್ಲಿ ನಡೆದಿದೆ.

ಹುಬ್ಬಳ್ಳಿಯಿಂದ ಬಂದಿದ್ದ ಖಾಸಗಿ ಕಂಪನಿಯೊಂದರ ಸಿಇಒ ನವೀನ್ ಝಾ ಅವರು ಗಾಂಧಿ ಬಜಾರ್ ರಾಘವೇಂದ್ರ ಸ್ವಾಮಿ ಮಠದ ಬಳಿ ಕಾರನ್ನು ನಿಲ್ಲಿಸಿ, ಶಾಪಿಂಗ್ಗೆ ಹೋಗಿ ಮರಳಿ ರಾತ್ರಿ 9 ರ ವೇಳೆ ವಾಪಸ್ ಕಾರಿನ ಬಳಿ ಬಂದಾಗ ಕಾರಿನ ಕಿಟಕಿ ಗಾಜುಗಳನ್ನು ಒಡೆದು, ಕಾರಿನಲ್ಲಿಟ್ಟಿದ್ದ ಲ್ಯಾಪ್ ಟಾಪ್, ಪಾಸ್ ಪೋರ್ಟ್ ಗಳನ್ನು ದುಷ್ಕರ್ಮಿಗಳು ಕದ್ದೊಯ್ದಿರುವುದು ಬೆಳಕಿಗೆ ಬಂದಿದೆ.

ಪೊಲೀಸ್ ಠಾಣೆಯಿಂದ ಸುಮಾರು 300ಮೀಟರ್ ದೂರದಲ್ಲಿಯೇ ಕಾರನ್ನು ಪಾರ್ಕ್ ಮಾಡಲಾಗಿದೆ. ಜನನಿಬಿಡ ಪ್ರದೇಶದಲ್ಲಿಯೇ ಕಳ್ಳರು ದುಷ್ಕೃತ್ಯವೆಸಗಿದ್ದಾರೆ ಎಂದು ನವೀನ್ ತಿಳಿಸಿದ್ದಾರೆ.

ತಕ್ಷಣ ಪೊಲೀಸ್ ಠಾಣೆಗೆ ತೆರಳಿದ ನವೀನ್ ಝಾ, ಘಟನೆ ಕುರಿತು ದೂರು ದಾಖಲಿಸಿದ್ದಾರೆ. ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮಾರವನ್ನು ಪರಿಶೀಲನೆ ನಡೆಸಿರುವ ಪೊಲೀಸರಿಗೆ ನಾಲ್ಕರಿಂದ ಐದು ಜನರ ಯುವಕರ ಗುಂಪೊಂದು ಕೃತ್ಯ ನಡೆಸಿರುವುದು ಕಂಡುಬಂದಿದ್ದು ಅವರಿಗಾಗಿ ಶೋಧ ನಡೆಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತ ವಿಶ್ವಗುರು ಆಗಬೇಕೆನ್ನುವುದ ಪ್ರಿಯಾಂಕ್‌ ಖರ್ಗೆಗೆ ಸಹಿಸಲಿಕ್ಕಾಗದ ಸಂಗತಿಯೇ: ಸಿಟಿ ರವಿ

ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಅಧ್ಯಕ್ಷ ಸಿದ್ದರಾಮಯ್ಯ, ಉಪಾಧ್ಯಕ್ಷರಾಗಿ ಯಾರು ಗೊತ್ತಾ

ಗಣೇಶ ಹಬ್ಬ 2025: ವಿಶೇಷ ದಿನದಂದು ಪರಿಸರ ಜಾಗೃತಿ ಮೂಡಿಸಿದ ಮಂತ್ರಾಲಯ ಶ್ರೀಗಳು

ದಸರಾ ಉದ್ಘಾಟನೆ ಮುನ್ನಾ ಬಾನು ಮುಪ್ತಾಕ್‌ರಿಂದ ಸ್ಪಷ್ಟನೆ ಕೇಳಿದ ಯದುವೀರ್ ಒಡೆಯರ್‌

ನಾನು ಹುಟ್ಟು ಕಾಂಗ್ರೆಸ್ಸಿಗ, ನಾನು ಕಾಂಗ್ರೆಸ್ಸಿಗನಾಗಿಯೇ ಸಾಯುತ್ತೇನೆ: ಡಿಕೆ ಶಿವಕುಮಾರ್ ಹೀಗಂದಿದ್ಯಾಕೆ

ಮುಂದಿನ ಸುದ್ದಿ
Show comments