Publish Date: Thu, 06 Sep 2018 (18:41 IST)
Updated Date: Thu, 06 Sep 2018 (18:44 IST)
ಅವಧಿಗೂ ಮುನ್ನವೇ ವಿಧಾನ ಸಭೆಯನ್ನು ವಿಸರ್ಜಿಸುವ ನಿರ್ಣಯವನ್ನು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ಕೈಗೊಂಡಿದ್ದಾರೆ.
ತೆಲಂಗಾಣ ವಿಧಾನಸಭೆಯನ್ನು ವಿಸರ್ಜಿಸಲು ಮುಖ್ಯಮಂತ್ರಿ ಕೆ.ಚಂದ್ರಶೇಖರ್ ನೇತೃತ್ವದ ಸರಕಾರ ನಿರ್ಧಾರ ಕೈಗೊಂಡಿದೆ. ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ಅವಧಿಗೂ ಮುನ್ನವೇ ವಿಧಾನಸಭೆ ವಿಸರ್ಜಿಸಲು ನಿರ್ಧಾರ ಕೈಗೊಳ್ಳಲಾಗಿದೆ.
ಸಂಪುಟದ ನಿರ್ಣಯವನ್ನು ಪ್ರಕಟಣೆಯಷ್ಟೇ ಬಾಕಿ ಉಳಿದಿದೆ. 2019ರ ಮೇ ವರೆಗೂ ಸರಕಾರದ ಅವಧಿ ಇದೆ. ಅವಧಿಗೂ ಮುನ್ನವೇ ವಿಧಾನ ಸಭೆ ವಿಸರ್ಜನೆಗೆ ಮುಂದಾಗಿದ್ದಾರೆ. ಹೀಗಾಗಿ ಲೋಕಸಭಾ ಚುನಾವಣೆ ಸಂದರ್ಭದಲ್ಲಿಯೇ ತೆಲಂಗಾಣ ವಿಧಾನ ಸಭೆ ಚುನಾವಣೆ ನಡೆಯುವ ಸಾಧ್ಯತೆಗಳು ಇವೆ.