Webdunia - Bharat's app for daily news and videos

Install App

ವೈದ್ಯಕೀಯ ಪಾಸ್ ನಲ್ಲಿ ಮದುವೆಗೆ ಹೋದವರಿಗೆ ಪೊಲೀಸರು ಮಾಡಿದ್ದೇನು ಗೊತ್ತಾ?

Webdunia
ಬುಧವಾರ, 15 ಏಪ್ರಿಲ್ 2020 (19:08 IST)
ವೈದ್ಯಕೀಯ ಪಾಸ್ ಪಡೆದು ಮದುವೆಗೆ ತೆರಳಿದವರಿಗೆ ತಕ್ಕ ಶಾಸ್ತಿಯನ್ನು ಪೊಲೀಸರು ಮಾಡಿದ್ದಾರೆ.  

ಲಾಕ್‍ಡೌನ್ ಹಿನ್ನೆಲೆಯಲ್ಲಿ ವಾಹನ ಸಂಚಾರ, ಜನರ ಓಡಾಟ ನಿರ್ಭಂದಿಸಿರುವದರಿಂದ ಆರೋಗ್ಯ, ತುರ್ತು ವೈದ್ಯಕೀಯ ತಪಾಸಣೆಗಾಗಿ ಮಾನವೀಯತೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಅಗತ್ಯವಿರುವವರಿಗೆ ಪಾಸ್ ನೀಡುವ ಸೌಲಭ್ಯ ಕಲ್ಪಿಸಿದೆ.

ಧಾರವಾಡ ಜಿಲ್ಲೆಯ ನರೇಂದ್ರ ಗ್ರಾಮದಲ್ಲಿ ಡಿವೈಎಸ್‍ಪಿ ರವಿನಾಯಕ್ ರೌಂಡ್ಸ್ ನಲ್ಲಿದ್ದಾಗ ವೈದ್ಯಕೀಯ ಪಾಸ್ ಪಡೆದು ಮದುವೆ ಕಾರ್ಯ ಮುಗಿಸಿ ಬಂದ ವಾಹನವನ್ನು ಜಪ್ತಿ ಮಾಡಿದ್ದಾರೆ. ಪಾಸ್ ದುರಪಯೋಗ ಪಡಿಸಿಕೊಂಡಿರುವವರು ವಧುವಿನ ಕಡೆಯವರಾಗಿದ್ದು, ಉಪ್ಪಿನ ಬೇಟಗೇರಿ ಗ್ರಾಮದವರೆಂದು ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮದುವೆ ಕಾರ್ಯ ಮುಗಿಸಿಕೊಂಡು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಸ್ಥಾಪಿಸಿರುವ ಚೆಕ್ ಪೋಸ್ಟ್‍ಗಳನ್ನು ತಪ್ಪಿಸಿ, ಹುಬ್ಬಳ್ಳಿಯಿಂದ ಕೆಎ-22 ಝೆಡ್-5691 ಸಂಖ್ಯೆಯ ಇನೋವಾ ವಾಹನದಲ್ಲಿ ಒಂದು ಮಗು ಸೇರಿದಂತೆ ಒಟ್ಟು 9 ಜನ ಹೊರಟಿದ್ದರು. ಡಿವೈಎಸ್‍ಪಿ ವಾಹನ ನಿಲ್ಲಿಸಿ ಪರಿಶೀಲಿಸಿದಾಗ ತುರ್ತು ವೈದ್ಯಕೀಯ ಅಗತ್ಯಕ್ಕಾಗಿ ನೀಡಿದ್ದ ಪಾಸ್ ದುರುಪಯೋಗ ಮಾಡಿಕೊಂಡಿದ್ದು ಅವರ ಗಮನಕ್ಕೆ ಬಂದಿದೆ.

ಎಸ್‍ಪಿ ವರ್ತಿಕಾ ಕಟಿಯಾರ್ ಅವರ ಮಾರ್ಗದರ್ಶನದಲ್ಲಿ ತಕ್ಷಣ ಕಾರ್ಯಪ್ರವೃತರಾದ ಡಿವೈಎಸ್‍ಪಿ ರವಿ ನಾಯಕ ಅವರು ಇನೋವಾ ವಾಹನದಲ್ಲಿದ್ದ 9 ಜನರನ್ನು ವೈದ್ಯಕೀಯ ತಪಾಸಣೆಗಾಗಿ ಪೊಲೀಸ್ ವಾಹನದಲ್ಲಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಿ, ಇನೋವಾ ವಾಹನವನ್ನು ಜಪ್ತಿ ಮಾಡಿದ್ದಾರೆ. ಅಲ್ಲದೇ ತಪಾಸಣೆ ನಂತರ ಈ ಎಲ್ಲ 9 ಜನರಿಗೆ ಹೋಮ್ ಕ್ವಾರಂಟೈನ್ ಕಡ್ಡಾಯಗೊಳ್ಳಿಸಿ, ಸಂಬಂಧಿಸಿದವರಿಗೆ ನಿರ್ದೇಶನ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Heavy Rain, ದ.ಕ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ

ಬಿಜೆಪಿ, ಆರ್‌ಎಸ್‌ಎಸ್ ನಡುವಿನ ಒಡನಾಟದ ಬಗ್ಗೆ ಮೋಹನ್ ಭಾಗವತ್ ಸ್ಫೋಟಕ ಮಾತು

ಇನ್‌ಸ್ಟಾಗ್ರಾಂನಲ್ಲಿ ವಿಚ್ಛೇಧನ ನೀಡಿ ಸುದ್ದಿಯಾಗಿದ್ದ ದುಬೈಗೆ ರಾಜಕುಮಾರಿಗೆ ಮತ್ತೇ ಮದುವೆ

ಧರ್ಮಸ್ಥಳ ಕೇಸ್ ಎಸ್‌ಐಟಿಗೆ ನೀಡಿದ ಹಿಂದಿನ ಉದ್ದೇಶ ಬಿಚ್ಚಿಟ್ಟ ಸಚಿವ ಎಂಬಿ ಪಾಟೀಲ್‌

ಭಾರತದ ವಾಯುಮಾಲಿನ್ಯದ ಬಗ್ಗೆ ಶಾಕಿಂಗ್ ವರದಿ, ಇಲ್ಲಿದೆ

ಮುಂದಿನ ಸುದ್ದಿ
Show comments