Webdunia - Bharat's app for daily news and videos

Install App

ಆಸ್ತಿಕೊಡಲಿಲ್ಲ ಎಂಬ ಕಾರಣಕ್ಕೆ ಮಗ ತಂದೆಗೆ ಮಾಡಿದ್ದೇನು ಗೊತ್ತಾ? ಕೇಳಿದ್ರೆ ಶಾಕ್ ಆಗ್ತೀರಾ

Webdunia
ಬುಧವಾರ, 29 ಆಗಸ್ಟ್ 2018 (06:33 IST)
ಬೆಂಗಳೂರು : ಆಸ್ತಿಗಾಗಿ ಜನರು ಸಂಬಂಧಗಳನ್ನು ಲೆಕ್ಕಿಸದೆ ಎಂತಹ ಕ್ರೂರ ಕೃತ್ಯಕ್ಕೂ ಮುಂದಾಗುತ್ತಾರೆ ಎಂಬುದಕ್ಕೆ ಜೆ.ಪಿ.ನಗರದ ಶಾಕಾಂಬರಿ ಬಡವಾಣೆಯಲ್ಲಿ ನಡೆದ ಘಟನೆ ಒಂದು ಸಾಕ್ಷಿಯಾಗಿದೆ.


ಆಸ್ತಿ ಬರೆದುಕೊಡಲಿಲ್ಲ ಅಂತಾ ಪಾಪಿ ಮಗ ಚೇತನ್ ಎಂಬಾತ ತನ್ನ ಬೆರಳುಗಳಿಂದಲೇ 65 ವರ್ಷದ ತಂದೆ ಪರಮೇಶ್ ಅವರ ಕಣ್ಣು ಕಿತ್ತು ಹಾಕಿದ್ದಾನೆ. ಈ ಘಟನೆ ಮಂಗಳವಾರ ಮಧ್ಯಾಹ್ನ ಸುಮಾರು 12.30ಕ್ಕೆ ವೇಳೆ ನಡೆದಿದೆ.


ವಿಧಾನಸೌಧದ ಮುಖ್ಯ ಕಾರ್ಯದರ್ಶಿಗಳ ಕಚೇರಿಯ ನಿವೃತ್ತ ನೌಕರರಾಗಿರುವ ಪರಮೇಶ್ ಶಾಕಾಂಬರಿ ನಗರದಲ್ಲಿ ಸ್ವಂತ ಮನೆ ಮಾಡಿಕೊಂಡು ನಿವೃತ್ತಿ ಜೀವನ ನಡೆಸುತ್ತಿದ್ದರು. ಅವರ ಎರಡನೇ ಮಗನಾಗಿರುವ ಚೇತನ್ ಒಬ್ಬ ಡ್ರಗ್ ಅಡಿಕ್ಟ್ ಆಗಿದ್ದು, ಮನೆಯಲ್ಲಿ ಹಣಕ್ಕಾಗಿ ಪೋಷಕರನ್ನು ಪದೇ ಪದೇ ಪೀಡಿಸುತ್ತಿದ್ದನಂತೆ. ಪೋಷಕರು ಹಣ ಕೊಡದೇ ಇದ್ದಾಗ ಆಸ್ತಿಯಲ್ಲಿ ಪಾಲು ಬೇಕೆಂದು ಹಠ ಹಿಡಿಯುತ್ತಾನಂತೆ.


ಅಂದು ಕೂಡ ಚೇತನ್ ಆಸ್ತಿಯಲ್ಲಿ ಪಾಲು ಬೇಕೆಂದು ತಂದೆಯೊಂದಿಗೆ ಜಗಳ ಮಾಡಿ ತನ್ನ ಬೆರಳುಗಳ ಉಗುರಿನ ಸಹಾಯದಿಂದ ತಂದೆಯ ಕಣ್ಣು ಗುಡ್ಡೆಯನ್ನು ಕಿತ್ತು ಬಿಸಾಕಿದ್ದಾನೆ. ಮತ್ತೊಂದು ಕಣ್ಣು ಸಂಪೂರ್ಣ ರಕ್ತಮಯವಾಗಿದೆ. ನಂತರ ಅಲ್ಲಿಂದ ಪರಾರಿಯಾಗಲು ಯತ್ನಿಸಿದ ಚೇತನ್ ನನ್ನು ಸ್ಥಳೀಯರು ಹಿಡಿದು ಪೊಲೀಸರ ವಶಕ್ಕೆ ನೀಡಿದ್ದಾರೆ.


ಗಾಯಗೊಂಡಿದ್ದ ಪರಮೇಶ್ ಅವರನ್ನು ಜೆ.ಪಿ.ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಅವರನ್ನು ನೋಡಿದ ವೈದ್ಯರು ಎರಡು ಕಣ್ಣುಗಳು ಸಂಪೂರ್ಣ ಹಾನಿಗೊಳಗಾಗಿವೆ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments