Select Your Language

Notifications

webdunia
webdunia
webdunia
webdunia

ಬಿಸಿಯೂಟ ಸೇವಿಸಲು ಬಂದ ವಿದ್ಯಾರ್ಥಿನಿಗೆ ಶಿಕ್ಷಕ ಮಾಡಿದ್ದೇನು ಗೊತ್ತಾ?

ಬಿಸಿಯೂಟ ಸೇವಿಸಲು ಬಂದ ವಿದ್ಯಾರ್ಥಿನಿಗೆ ಶಿಕ್ಷಕ ಮಾಡಿದ್ದೇನು ಗೊತ್ತಾ?
ಬೆಂಗಳೂರು , ಮಂಗಳವಾರ, 23 ಏಪ್ರಿಲ್ 2019 (07:12 IST)
ಬೆಂಗಳೂರು : ಶಿಕ್ಷಕನೊಬ್ಬ ವಿದ್ಯಾರ್ಥಿನಿಯ ಖಾಸಗಿ ಅಂಗ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಗ್ರಾಮವೊಂದರ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದೆ.


ಬೇಸಿಗೆ ರಜೆ ಇದ್ದರೂ ಶಾಲೆಯಲ್ಲಿ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡಲಾಗುತ್ತಿದ್ದ ಹಿನ್ನಲೆಯಲ್ಲಿ ಶಾಲೆಗೆ ಬಂದ ವಿದ್ಯಾರ್ಥಿಗಳು ಬಿಸಿಯೂಟ ಸೇವಿಸಿ ಮನೆಗೆ ಹಿಂದಿರುಗಿದ್ದಾರೆ. ಆದರೆ 5 ನೇ ತರಗತಿ ವಿದ್ಯಾರ್ಥಿನಿಯೊಬ್ಬಳನ್ನು ಮನೆಗೆ ಕಳುಹಿಸದೆ ಶಾಲೆಯಲ್ಲಿಯೇ ಉಳಿಸಿಕೊಂಡ ಶಿಕ್ಷಕನೊಬ್ಬ, ಆಕೆಯನ್ನು ಮೇಲೆ ಕೂರಿಸಿಕೊಂಡು ಮೈಕೈ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ.


ಈ ವಿಚಾರವನ್ನು  ವಿದ್ಯಾರ್ಥಿನಿ ಪೋಷಕರಿಗೆ ತಿಳಿಸಿದ ಕಾರಣ ಶಾಲೆಯ ಬಳಿ ಜಮಾಯಿಸಿದ ಪೋಷಕರು ಹಾಗೂ ಗ್ರಾಮಸ್ಥರು ಶಿಕ್ಷಕನನ್ನು ಥಳಿಸಿ ವಿಶ್ವನಾಥಪುರ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದು ದೇಶದ 15 ರಾಜ್ಯಗಳಲ್ಲಿ 3ನೇ ಹಂತದ ಮತದಾನ