Select Your Language

Notifications

webdunia
webdunia
webdunia
Sunday, 13 April 2025
webdunia

ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಕೊಟ್ಟ ವಾರ್ನಿಂಗ್ ಏನು ಗೊತ್ತಾ?

ಕಾಂಗ್ರೆಸ್
ಬೆಂಗಳೂರು , ಭಾನುವಾರ, 23 ಸೆಪ್ಟಂಬರ್ 2018 (20:28 IST)
ರಾಜ್ಯ ರಾಜಕೀಯದಲ್ಲಿ ಚಟುವಟಿಕೆಗಳು, ಗೊಂದಲಗಳು ಮುಂದುವರೆದಿರುವ ಬೆನ್ನಲ್ಲೇ ಕಾಂಗ್ರೆಸ್ ನ ರಾಜ್ಯ ಉಸ್ತುವಾರಿ ಪಕ್ಷದ ಅತೃಪ್ತರಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ.

ಯಾವುದೇ ಕಾರಣಕ್ಕೂ ಪಕ್ಷದ ಅತೃಪ್ತರ ಬ್ಲಾಕಮೇಲ್ ತಂತ್ರಕ್ಕೆ ಮಣಿಯುವುದಿಲ್ಲ. ಪಕ್ಷದ ಶಿಸ್ತು ಉಲ್ಲಂಘನೆ ಮಾಡುವುದನ್ನು ಸಹಿಸಿಕೊಳ್ಳುವುದಿಲ್ಲ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಕೆಪಿಸಿಸಿ ಕಾರ್ಯಾಲಯ ಮುಂಭಾಗದಲ್ಲಿ ಮಹಿಳಾ ಕಾಂಗ್ರೆಸ್ ನ ನೂತನ ಲೋಗೋ ಬಿಡುಗಡೆ ಮಾಡಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಕೆಲವು ಅತೃಪ್ತ ಶಾಸಕರು ಅಧಿಕಾರಕ್ಕಾಗಿ ನಡೆಸಿರುವ ಬ್ಲಾಕಮೇಲ್ ತಂತ್ರಗಾರಿಕೆ ವಿರುದ್ಧ ಕಿಡಿಕಾರಿದರು. ನಮ್ಮ ಯಾವ ಶಾಸಕರೂ ಪಕ್ಷ ಬಿಡುವುದಿಲ್ಲ ಎಂದೂ ಹೇಳಿದರು.



Share this Story:

Follow Webdunia kannada

ಮುಂದಿನ ಸುದ್ದಿ

ಗೆಳತಿಯೊಂದಿಗೆ ಜನುಮದಿನ ಆಚರಿಸಿಕೊಳ್ಳುತ್ತಿದ್ದ ಯುವಕನ ಕೊಲೆ