Webdunia - Bharat's app for daily news and videos

Install App

ಆಪರೇಷನ್ ಕಮಲ ನಡೆಯುವುದು ಎಲ್ಲೆಲ್ಲಿ ಗೊತ್ತಾ?

Webdunia
ಬುಧವಾರ, 12 ಸೆಪ್ಟಂಬರ್ 2018 (18:43 IST)
ರಾಜ್ಯದ ಸಮ್ಮಿಶ್ರ ಸರಕಾರ ಆಗ ಪತನವಾಗುತ್ತದೆ. ಈಗ ಪತನವಾಗುತ್ತದೆ ಎಂದು ಬಿಜೆಪಿ ನಾಯಕರು ಹೇಳುತ್ತಲೇ ಇದ್ದಾರೆ. ಇದಕ್ಕೆ ಇಂಬು ಕೊಡುವಂತೆ ತೆರೆಮರೆಯಲ್ಲಿ ಆಪರೇಷನ್ ಕಮಲ ಮತ್ತೆ ನಡೆಯುತ್ತಿದೆ.

ರಾಜ್ಯದ ರಾಜಕೀಯದಲ್ಲಿ ಭಾರೀ ಬದಲಾವಣೆ ಗಾಳಿ ಬೀಸುತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮೊದಲಿಗಿಂತಲೂ ಹೆಚ್ಚಾಗಿ ಈಗ ರಾಜಕೀಯ ದಾಳ ಉರುಳಿಸುವುದರಲ್ಲಿ ತಲ್ಲೀನರಾಗಿದ್ದಾರೆ. ಹೀಗಾಗಿ ಹೇಗಾದರೂ ಸರಿ ಅಧಿಕಾರಕ್ಕೆ ಬರಬೇಕು. ಬಿಜೆಪಿ ಸರಕಾರ ಆಡಳಿತಕ್ಕೆ ತರಬೇಕು ಎಂದು ಪಣತೊಟ್ಟಿದ್ದು, ಅದಕ್ಕಾಗಿ ತೆರೆಮರೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಶಾಸಕರನ್ನು ಸೆಳೆಯುವ ಯತ್ನ ಮಾಡುತ್ತಿದ್ದಾರೆ.

ಹಳೆ ಮೈಸೂರು ಹಾಗೂ ಮೈಸೂರು ಭಾಗದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪ್ರಬಲವಾಗಿವೆ. ಹೀಗಾಗಿ ಮೈಸೂರು ಪ್ರದೇಶ ಹೊರತುಪಡಿಸಿ ಉತ್ತರ ಕರ್ನಾಟಕ ಹಾಗೂ ಹೈದ್ರಾಬಾದ್ ಕರ್ನಾಟಕ ಪ್ರದೇಶದಲ್ಲಿರುವ ಲಿಂಗಾಯತ ಶಾಸಕರನ್ನು ಬಿಜೆಪಿಗೆ ಸೆಳೆಯುವ ಯತ್ನ ಬಿಜೆಪಿ ನಡೆಸಿದೆ. ಹೀಗಾಗಿ ಹೈ-ಕ ಪ್ರದೇಶ ಮತ್ತು ಉತ್ತರ ಕರ್ನಾಟಕದತ್ತ ಬಿ.ಎಸ್.ವೈ ಹೆಚ್ಚಾಗಿ ಚಿತ್ತ ಹರಿಸಿದ್ದಾರೆ ಎನ್ನಲಾಗಿದೆ.

ಮೈಸೂರು ಭಾಗದಲ್ಲಿ ಜೆಡಿಎಸ್-ಕಾಂಗ್ರೆಸ್ ಶಾಸಕರು ಬಿಜೆಪಿ ಸೇರ್ಪಡೆಗೆ ಮುಂದಾದರೂ ಅದಕ್ಕೆ ಬಿಜೆಪಿ ವರಿಷ್ಠರು ಆಸಕ್ತಿ ತೋರುತ್ತಿಲ್ಲ ಎನ್ನಲಾಗಿದೆ. ಏಕೆಂದರೆ ಉಪ ಚುನಾವಣೆಯಲ್ಲಿ ಗೆಲುವು ಕಷ್ಟ ಎಂಬುದು ವರಿಷ್ಠರ ಲೆಕ್ಕಾಚಾರವಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈನಿಂದ ಜೋಧಪುರಕ್ಕೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ರನ್‌ ವೇಯಲ್ಲೇ ನಿಲ್ಲಿಸಿದ್ಯಾಕೆ

ಯೂಟ್ಯೂಬರ್‌ ಸಮೀರ್‌ಗೆ ಧರ್ಮಸ್ಥಳದ ಎಸ್‌ಐಟಿಯಿಂದ ಬಂತು ನೋಟಿಸ್‌

ಸಿಎಂ, ಡಿಸಿಎಂಗೆ ಮುಖವಾಡ ಹಾಕಿ ಓಡಾಡುವ ಪರಿಸ್ಥಿತಿ: ವಿಜಯೇಂದ್ರ

ಕಿಂಗ್‌ ಕೋಬ್ರಾ ಪೋಟೋ ರಾಕೆಟ್‌: ಇಬ್ಬರ ವಿರುದ್ಧ ಎಫ್‌ಐಆರ್‌

ಧರ್ಮಸ್ಥಳದಲ್ಲಿ ಮಗಳು ನಾಪತ್ತೆಯಾಗಿದ್ದಾಳೆಂದು ದೂರು ನೀಡಿದ್ದ ಸುಜಾತಾ ಭಟ್‌ಗೆ ಎದುರಾಯಿತು ವಿಚಾರಣೆ

ಮುಂದಿನ ಸುದ್ದಿ
Show comments