Webdunia - Bharat's app for daily news and videos

Install App

ಸಿಎಂ ಪರವಾಗಿ ಪ್ರಚಾರ ಮಾಡುವುದಿಲ್ಲವೆಂದ ನಟ ಯಶ್, ಸಚಿವ ಎಂ.ಬಿ ಪಾಟೀಲ್ ಪರ ಪ್ರಚಾರ ಮಾಡಿದ್ಯಾಕೆ ಗೊತ್ತಾ?

Webdunia
ಸೋಮವಾರ, 7 ಮೇ 2018 (07:02 IST)
ವಿಜಯಪುರ : ಸಿಎಂ ಸಿದ್ದರಾಮಯ್ಯ ಅವರ ಪರವಾಗಿ ಬಾದಾಮಿ ಕ್ಷೇತ್ರದಲ್ಲಿ ಪ್ರಚಾರ ಮಾಡಲು ಹೋಗುವುದಿಲ್ಲವೆಂದ ನಟ ಯಶ್ ಅವರು ಮಾತ್ರ ಜಲ ಸಂಪನ್ಮೂಲ ಸಚಿವ ಎಂ.ಬಿ ಪಾಟೀಲ್ ಅವರ ಪರವಾಗಿ  ಮತಯಾಚಿಸಿದ್ದಾರೆ.


ತಿಕೋಟಾದಲ್ಲಿ ರೋಡ್ ಶೋ ಮೂಲಕ ತೆರೆದ ವಾಹನದಲ್ಲಿ ಆಗಮಿಸಿ  ಬಹಿರಂಗ ಸಭೆಯಲ್ಲಿ ಎಂ.ಬಿ ಪಾಟೀಲ್ ಪರ ಮತಯಾಚನೆ ಮಾಡಿದ್ದಾರೆ. ಹಾಗೇ ಎಂಬಿ ಪಾಟೀಲ್ ಜಿಲ್ಲೆಯನ್ನು ಸಾಕಷ್ಟು ಅಭಿವೃದ್ಧಿ ಪಥದತ್ತ ಕೊಂಡೊಯ್ಯೂತ್ತಿದ್ದಾರೆ. ಅವರಿಗೆ ನೀವು ಈ ಬಾರಿ ಮತ ನೀಡಿ ಗೆಲ್ಲಿಸಬೇಕು ಎಂದು ಯಶ್ ಮನವಿ ಮಾಡಿದ್ದಾರೆ.


‘ಎಂ.ಬಿ ಪಾಟೀಲ್ ಒಬ್ಬರು ಕೋಟಿ ವೃಕ್ಷ ಅಭಿಯಾನ ಹಮ್ಮಿಕೊಂಡಿದ್ದರು. ಅವರ ಕೋಟಿ ವೃಕ್ಷ ಅಭಿಯಾನದ ಕನಸಲ್ಲಿ ನಾನು ಕೂಡಾ ಒಬ್ಬ ಬ್ರ್ಯಾಂಡ್ ರಾಯಭಾರಿ. ಈಗಾಗಲೇ 30-35 ಲಕ್ಷ ಮರಗಳನ್ನು ಬೆಳೆಸಿದ್ದಾರೆ. ಇನ್ನು ಅವರ ಕೋಟಿ ವೃಕ್ಷ ಅಭಿಯಾನ ಮುಂದುವರೆದಿದೆ. ಎಂ.ಬಿ ಪಾಟೀಲ್ ಅವರು ಆತ್ಮೀಯ ಸ್ನೇಹಿತರು. ಯಶೋ ಮಾರ್ಗದ ಮೂಲಕ ಇಬ್ಬರು ಸೇರಿ ಅಭಿವೃದ್ಧಿ ಕೆಲಸ ಮಾಡಿದ್ದೇವೆ. ಮತ್ತಷ್ಟು ನೀರಾವರಿ ಎಲ್ಲ ಯೋಜನೆಗಳು ಶೀರ್ಘದಲ್ಲಿ ಜಾರಿಗೆ ಬರಲಿದೆ. ನೀರಾವರಿ ವಿಷಯಕ್ಕೆ ಸಂಬಂಧಪಟ್ಟಂತೆ ಸಚಿವ ಪಾಟೀಲ್ ಹಾಗೂ ನಾನು ಪರಸ್ಪರ ಸಾಕಷ್ಟು ಬಾರಿ ಚರ್ಚೆ ಮಾಡಿದ್ದೇವೆ. ನನ್ನ ಗುರಿನೂ ಒಂದೇ ಸಚಿವ ಪಾಟೀಲ್ ಗುರಿನೂ ಒಂದೇ. ಬಾಕಿ ಉಳಿದಿರುವ ಯೋಜನೆಗಳು ಕಾರ್ಯರೂಪಕ್ಕೆ ಬರಬೇಕು ಎಲ್ಲರಿಗೂ ನೀರು ಸಿಗುವ ಹಾಗೆ ಆಗಬೇಕು. 5 ವರ್ಷದಲ್ಲಿ ಒಂದು ಕೋಟಿ ಗಿಡ ನೆಡಬೇಕೆಂಬ ಗುರಿಯನ್ನು ಎಂ.ಬಿ ಪಾಟೀಲ್ ಇಟ್ಟುಕೊಂಡಿದ್ದಾರೆ. ನೀರಾವರಿ ಕ್ಷೇತ್ರದಲ್ಲಿ ಸಾಕಷ್ಟು ಕೆಲಸ ಮಾಡಿದ್ದಾರೆ. ಸಾಕಷ್ಟು ಜ್ಞಾನ ಅವರಿಗೆ ಇದೆ’ ಎಂದು  ಎಂ.ಬಿ ಪಾಟೀಲ್ ಅವರ ಪರವಾಗಿ  ಯಶ್ ಮತಯಾಚಿಸಲು ಕಾರಣವೆನೆಂಬುದನ್ನು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಬೆಂಗಳೂರಿಗರಿಗೆ ಮುಂದಿನ 5 ದಿನಗಳಿಗೆ ಗುಡ್ ನ್ಯೂಸ್

Karnataka Weather: ಈ ವರ್ಷ ಮಳೆಗಾಲದಲ್ಲಿ ಹೇಗಿರಲಿದೆ ಮಳೆ, ಮುಂಗಾರು ಪ್ರವೇಶ ದಿನಾಂಕ ಪ್ರಕಟ

Karnataka caste census: ರಾಹುಲ್ ಗಾಂಧಿ ಅಂದುಕೊಂಡಷ್ಟು ಸುಲಭವಲ್ಲ ಕರ್ನಾಟಕದಲ್ಲಿ ಜಾತಿಗಣತಿ ಜಾರಿ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

ಮುಂದಿನ ಸುದ್ದಿ
Show comments