Webdunia - Bharat's app for daily news and videos

Install App

ಅಂಬರೀಶ್ ಅಂತಿಮ ದರ್ಶನಕ್ಕೆ ನಟಿ ರಮ್ಯಾ ಬಾರದೇ ಇರಲು ಕಾರಣವೇನು ಗೊತ್ತಾ?

Webdunia
ಮಂಗಳವಾರ, 27 ನವೆಂಬರ್ 2018 (09:20 IST)
ಬೆಂಗಳೂರು : ರೆಬಲ್ ಸ್ಟಾರ್ ಅಂಬರೀಶ್ ಅಂತಿಮ ದರ್ಶನ ಪಡೆಯಲು ಮಾಜಿ ಸಂಸದೆ, ನಟಿ ರಮ್ಯಾ ಬಾರದೇ ಇರುವುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಬಾರೀ ವಿರೋಧ ವ್ಯಕ್ತವಾಗಿದೆ. ಆದರೆ ಇದೀಗ ನಟಿ ರಮ್ಯಾ ತಾವು ಗೈರು ಹಾಜರಾಗಲು ಕಾರಣವೆನೆಂಬುದನ್ನು ತಿಳಿಸಿದ್ದಾರೆ.


ಅಂಬಿ ಅಂತಿಮ ದರ್ಶನ ಪಡೆಯಲು ದೂರದೂರಿನಿಂದ ಸಾವಿರಾರು ಅಭಿಮಾನಿಗಳು, ಆಪ್ತರು, ಗಣ್ಯರು ಎಲ್ಲರೂ ಬಂದಿದ್ದರು. ಆದರೆ ಅಂಬರೀಶ್ ಅವರಿಂದ ಸಂಸದೆ ಪಟ್ಟ ಪಡೆದುಕೊಂಡ ನಟಿ ರಮ್ಯ ಮಾತ್ರ ಬಂದಿರಲಿಲ್ಲ. ಇದಕ್ಕೆ ಜನರಿಂದ ಬಾರೀ ವಿರೋಧ ವ್ಯಕ್ತವಾಗಿತ್ತು. ಇದೀಗ ರಮ್ಯಾ ಅವರು ತಾವು ಅಪರೂಪದ ಖಾಯಿಲೆಯಿಂದ ಬಳಲುತ್ತಿರುವುದಾಗಿ ತಮ್ಮ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.


ರಮ್ಯಾ ಆಸ್ಟಿಯೋಕ್ಲ್ಯಾಸ್ಟೋಮಾ ಎಂಬ ಮೂಳೆಗಳಿಗೆ ಸಂಬಂಧಿಸಿದಂತೆ ಖಾಯಿಲೆಗೆ ತುತ್ತಾಗಿದ್ದಾರಂತೆ. ಕಾಲಿನ ಎಲುಬುಗಳ ನಡುವೆ ಉಂಟಾಗಿರುವ ಸಮಸ್ಯೆ ಇದಾಗಿದ್ದು, ಈ ರೋಗ ಮಹಿಳೆಯರಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತಂತೆ. ಸ್ವಲ್ಪ ನಿರ್ಲಕ್ಷ್ಯ ವಹಿಸಿದರೂ ಕ್ಯಾನ್ಸರ್ ಬರುವ ಸಾಧ್ಯತೆಯಿತ್ತು ಎಂದು ಬರೆದುಕೊಂಡಿರುವ ರಮ್ಯಾ ಕಾಲಿಗೆ ಬ್ಯಾಂಡೆಜ್ ಹಾಕಿಕೊಂಡ ಫೋಟೋವೊಂದನ್ನು ಪೋಸ್ಟ್ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments