Webdunia - Bharat's app for daily news and videos

Install App

ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಹಾಜರಾಗದ ಕಾಂಗ್ರೆಸ್ ಜನಪ್ರತಿನಿಧಿಗಳು ಕಾರಣವೇನು ಗೊತ್ತಾ?

Webdunia
ಬುಧವಾರ, 10 ಅಕ್ಟೋಬರ್ 2018 (13:37 IST)
ಮೈಸೂರು : ನಾಡಹಬ್ಬ ದಸರಾ ಮಹೋತ್ಸವಕ್ಕೆ ಇಂದಿನಿಂದ ಚಾಲನೆ ದೊರೆತಿದ್ದು, ಚಾಮುಂಡಿ ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಇನ್ಫೋಸಿಸ್  ಸಂಸ್ಥಾಪಕಿ ಡಾ. ಸುಧಾ ಮೂರ್ತಿ ಉದ್ಘಾಟಿಸಿದ್ದಾರೆ. ನಾಡಿನಲ್ಲಿ ವೈಭವದಿಂದ  ಮಾಡುವ ಈ ಉತ್ಸವವನ್ನು ರಾಜ್ಯ ಸರ್ಕಾರವೇ ಮುಂದೆ ನಿಂತು ಆಚರಿಸಬೇಕು. ಆದರೆ ದಸರಾ ಉದ್ಘಾಟನೆ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್​ ಸೇರಿದಂತೆ ಕಾಂಗ್ರೆಸ್​ನ ಯಾವ ಜನಪ್ರತಿನಿಧಿಗಳು ಹಾಜರಾಗದೆ, ದೂರವೇ ಉಳಿದಿದ್ದಾರೆ.


ಕಳೆದ ಬಾರಿ ದಸರೆಯನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಉದ್ಘಾಟಿಸಿದ್ದರು. ಅಂದು ಕಾಂಗ್ರೆಸ್ ನಾಯಕರ ದಂಡೇ  ಈ ಸಮಾರಂಭದಲ್ಲಿ ಭಾಗವಹಿಸಿತ್ತು. ಆದರೆ ಈ ಬಾರಿ ಯಾವ ಕಾಂಗ್ರೆಸ್​ ಜನಪ್ರತಿನಿಧಿಗಳು ಉದ್ಘಾಟನೆ ಕಾರ್ಯಕ್ರಮಕ್ಕೆ ಪಾಲ್ಗೊಳ್ಳಲಿಲ್ಲ.


ಆದರೆ ನಾಡಹಬ್ಬ ಉದ್ಘಾಟನೆ ಕಾರ್ಯಕ್ರಮ ಇದ್ದರೂ ತಮ್ಮ ಕ್ಷೇತ್ರ ಕೊರಟಗೆರೆಯಲ್ಲಿ  ಬೇರೊಂದು ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಪರಮೇಶ್ವರ್​ ಅತಿಥಿಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.


ಅಲ್ಲದೇ ಸರ್ಕಾರದಲ್ಲಿ ಎರಡನೇ ಸ್ಥಾನದಲ್ಲಿದ್ದರೂ ತಮ್ಮನ್ನ ನಿರ್ಲಕ್ಷಿಸಲಾಗುತ್ತಿದೆ. ಮೈಸೂರು ದಸರಾ ಉತ್ಸವದ ಸಿದ್ದತಾ ಸಭೆಗಳಿಗೂ ತಮ್ಮನ್ನು ಆಹ್ವಾನಿಸಿಲ್ಲ. ಸರ್ಕಾರದ ಮಟ್ಟದಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತಿದೆ. ವರ್ಗಾವಣೆ ವಿಚಾರ ಸೇರಿ ಯಾವುದೇ ವಿಚಾರಕ್ಕೂ ತಮ್ಮ ಅಭಿಪ್ರಾಯಗಳಿಗೆ ಬೆಲೆಯೇ ಇಲ್ಲ ಎಂಬ ಕಾರಣಕ್ಕೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ದಸರಾ ಉದ್ಘಾಟನೆಗೆ ಗೈರಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಒಟ್ಟಾರೆ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದು ಐದು ತಿಂಗಳು ಕಳೆದರೂ ಎರಡೂ ಪಕ್ಷಗಳಲ್ಲಿ ಹೊಂದಾಣಿಕೆ ಇಂದಿಗೂ ಸಾಧ್ಯವಾಗಿಲ್ಲ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚುನಾವಣೆ ಅಕ್ರಮ ನಡೆದಿದೆ ಎಂದ ರಾಹುಲ್ ಗಾಂಧಿಗೆ ಸಾಕ್ಷಿ ಸಮೇತ ತಿರುಗೇಟು ಕೊಟ್ಟ ಆಯೋಗ

ಮುಂಬೈ: 12ನೇ ಕಟ್ಟಡದ ಕಿಟಕಿಯಿಂದ ಆಯತಪ್ಪಿ ಬಿದ್ದು ನಾಲ್ಕು ವರ್ಷದ ಬಾಲಕಿ ಸಾವು

ಕಾಂಗ್ರೆಸ್ಸಿನ 9 ಲೋಕಸಭಾ ಸೀಟ್ ಗೆಲುವಿನಲ್ಲಿ ಯಾವುದೋ ಷಡ್ಯಂತ್ರ: ಸಿ.ಟಿ.ರವಿ ಆರೋಪ

ಸಹೋದರರಿಬ್ಬರಿಂದ ನಿರಂತರ ಅತ್ಯಾಚಾರ: 5 ತಿಂಗಳ ಗರ್ಭಿಣಿ ಸಂತ್ರಸ್ತೆಯನ್ನು ಜೀವಂತ ಹೂಳಲು ಯತ್ನ

ಕೊಚ್ಚಿಯ ಸೌಮ್ಯಾ ರೇಪ್ ಆ್ಯಂಡ್ ಮರ್ಡರ್ ಆರೋಪಿ ಜೈಲಿನಿಂದ ತಪ್ಪಿಸಿ, ಬಾವಿಯಲ್ಲಿ ಅವಿತಿದ್ದ ಕಾಮುಕ

ಮುಂದಿನ ಸುದ್ದಿ
Show comments