Select Your Language

Notifications

webdunia
webdunia
webdunia
webdunia

ಡಿಕೆಶಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಲು ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದರೂ ಇನ್ನೂ ಅನೌನ್ಸ್ ಆಗಲಿಲ್ಲ ಯಾಕೆ ಗೊತ್ತಾ?

ಡಿಕೆಶಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಲು ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದರೂ ಇನ್ನೂ ಅನೌನ್ಸ್ ಆಗಲಿಲ್ಲ ಯಾಕೆ ಗೊತ್ತಾ?
ಬೆಂಗಳೂರು , ಶುಕ್ರವಾರ, 17 ಜನವರಿ 2020 (10:50 IST)
ಬೆಂಗಳೂರು : ಡಿಕೆ ಶಿವಕುಮಾರ್ ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಲು ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟರೂ ಕೂಡ ಕೆಪಿಸಿಸಿ ಅಧ್ಯಕ್ಷ ಹುದ್ದೆ ಇನ್ನೂ ಅನೌನ್ಸ್ ಆಗಲಿಲ್ಲ.

ಹೌದು. ಕೆಪಿಸಿಸಿ ಅಧ್ಯಕ್ಷ ಹುದ್ದೆ ನಿನ್ನೆಯೇ ಅನೌನ್ಸ್ ಆಗಬೇಕಿತ್ತು. ಆದರೆ  ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆಶಿ ಆಯ್ಕೆ ವಿಚಾರದಲ್ಲಿ ಷರತ್ತು ವಿಧಿಸಿದ್ರಾ ಸಿದ್ದರಾಮಯ್ಯ? ಕಾರ್ಯಾಧ್ಯಕ್ಷರ ಹುದ್ದೆಗೆ ಪಟ್ಟು ಹಿಡಿದ್ರಾ ಸಿದ್ದರಾಮಯ್ಯ? ಎಂಬ  ಅನುಮಾನ ವ್ಯಕ್ತವಾಗಿದೆ. ಕಾರ್ಯಾಧ್ಯಕ್ಷ ಹುದ್ದೆಗೆ ಡಿಕೆಶಿ ಸಿದ್ದರಾಮಯ್ಯ  ನಡುವೆ ಜಿದ್ದಾಜಿದ್ದಿ ನಡೆದಿದ್ದು ಕಾರ್ಯಾಧ್ಯಕ್ಷ ಹುದ್ದೆ ಸೃಷ್ಟಿಸುವಂತೆ ಸಿದ್ದರಾಮಯ್ಯ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ.  ಪರಿಶಿಷ್ಟ ಜಾತಿ, ಪಂಗಡ, ಅಲ್ಪಸಂಖ್ಯಾತ, ವೀರಶೈವ ಲಿಂಗಾಯುತ ಒಟ್ಟು 4 ಕಾರ್ಯಾಧ್ಯಕ್ಷ ಹುದ್ದೆ ಸೃಷ್ಟಿಸುವಂತೆ ಹೈಕಮಾಂಡ್ ಗೆ ಒತ್ತಡ ಹಾಕಿದ್ದಾರೆ ಎನ್ನಲಾಗಿದೆ.

ಪರಿಶಿಷ್ಟ ಪಂಗಡದಿಂದ ಸತೀಶ್ ಜಾರಕಿಹೊಳಿ, ಅಲ್ಪಸಂಖ್ಯಾತ ಕೋಟಾದಿಂದ ಯುಟಿ ಖಾದರ್ ಅಥವಾ ಜಮೀರ್ ಅಹ್ಮದ್, ಉಳಿದಂತೆ ಹಾಲಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಯನ್ನ ಮುಂದುವರಿಸಿ, ಎಂಬಿ ಪಾಟೀಲ್ ರನ್ನ ಸಿಎಲ್ ಪಿ ಲೀಡರ್ ಮಾಡಿ , ನನಗೆ ವಿಪಕ್ಷ ನಾಯಕ ಸ್ಥಾನವೊಂದೇ ಸಾಕು. ಇದರಿಂದ 4 ದಿಕ್ಕಿನಲ್ಲಿ ಪಕ್ಷ ಸಂಗಟನೆ ಮಾಡಬಹುದು , ಸಾಮಾಜಿಕ ನ್ಯಾಯ ಸಿಕ್ಕಿದಂತಾಗುತ್ತದೆ ಎಂಬುದು ಸಿದ್ದರಾಮಯ್ಯ ಪ್ಲ್ಯಾನ್ ಎನ್ನಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ನಾಳೆ ಅಮಿತ್ ಶಾ ರಾಜ್ಯಕ್ಕೆ ಆಗಮಿಸುತ್ತಿರುವ ಹಿನ್ನಲೆ; ಸಿಎಂ ಭೇಟಿ ಮಾಡಿದ ಸಚಿವ ಸ್ಥಾನದ ಆಕಾಂಕ್ಷಿಗಳು