Select Your Language

Notifications

webdunia
webdunia
webdunia
webdunia

ಮದ್ದೂರು ಪ್ರತಿಭಟನೆಯಲ್ಲಿ ಲಾಠಿ ಏಟು ತಿಂದು ಸುದ್ದಿಯಾಗಿದ್ದ ಮಹಿಳೆ ಮೇಲೆ ಬಿತ್ತು ಕೇಸ್, ಯಾಕೆ ಗೊತ್ತಾ

ಮದ್ದೂರು ಗಣೇಶ ಹಬ್ಬ

Sampriya

ಮಂಡ್ಯ , ಗುರುವಾರ, 11 ಸೆಪ್ಟಂಬರ್ 2025 (21:33 IST)
ಮಂಡ್ಯ: ಗಣೇಶ ವಿಸರ್ಜನೆ ವೇಳೆ ಲಾಠಿ ಏಟು ತಿಂದಿದ್ದ ಮಹಿಳೆ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಸಿಎಂ ಹಾಗೂ ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ ಕೊಟ್ಟ ಹಿನ್ನೆಲೆ ಶಿವಪುರ ನಿವಾಸಿ ಜ್ಯೋತಿ ಅವರ ವಿರುದ್ಧ ಮದ್ದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮದ್ದೂರು‌ ಠಾಣೆಯ ಇನ್‌ಸ್ಪೆಕ್ಟರ್‌ ಶಿವಕುಮಾರ್ ದೂರಿನ ಅನ್ವಯ ಪ್ರಕರಣ ದಾಖಲಾಗಿದೆ. ಅನ್ಯಧರ್ಮದ ವಿಚಾರವಾಗಿ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ. ಪರಸ್ಪರ ಕೋಮುಗಳ ನಡುವೆ ವೈಮನಸ್ಸು, ವೈರತ್ವಕ್ಕೆ ಉತ್ತೇಜನ ನೀಡುವ ಆರೋಪದಲ್ಲಿ ಎಫ್‌ಐಆರ್‌ ಆಗಿದೆ.

ಮದ್ದೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲುತೂರಾಟ ನಡೆದಿತ್ತು. ಈ ಘಟನೆ ಉದ್ವಿಗ್ನತೆಗೆ ಕಾರಣವಾಗಿತ್ತು. ಮಾರನೇ ದಿನ ಸಾವಿರಾರು ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಜಮಾಯಿಸಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪೊಲೀಸರು ಲಾಠಿ ಚಾರ್ಜ್‌ ನಡೆಸಿದ್ದರು. ಆಗ ಮಹಿಳೆ ಜ್ಯೋತಿ ಕೂಡ ಲಾಠಿ ಏಟು ತಿಂದಿದ್ದರು. ಈ ದೃಶ್ಯದ ವೀಡಿಯೋ ಎಲ್ಲೆಡೆ ವೈರಲ್‌ ಆಗಿತ್ತು. ಪೊಲೀಸರ ನಡೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

2017ರಲ್ಲಿ ಪೊಲೀಸ್ ಅಧಿಕಾರಿಯ ಕೊಲೆ ಯತ್ನ ಪ್ರಕರಣ: ಬಂಧಿತ ಆರೋಪಿ ಕೊನೆಗೂ ಅರೆಸ್ಟ್‌