Webdunia - Bharat's app for daily news and videos

Install App

ಸಿಎಂ ಕುರ್ಚಿ ಅಂಗಡಿಯಲ್ಲಿ ಮಾರಾಟಕ್ಕಿರುವ ವಸ್ತುನಾ?: ಯಡ್ಡಿಗೆ ಕಾಗೋಡು ಲೇವಡಿ

Webdunia
ಬುಧವಾರ, 26 ಅಕ್ಟೋಬರ್ 2016 (17:14 IST)
ಮುಂದಿನ ಮುಖ್ಯಮಂತ್ರಿ ನಾನೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಆದರೆ, ಮುಖ್ಯಮಂತ್ರಿ ಕುರ್ಚಿ ಅಂಗಡಿಯಲ್ಲಿ ಮಾರಾಟಕ್ಕಿರುವ ವಸ್ತುನಾ? ಮುಖ್ಯಮಂತ್ರಿ ಆಯ್ಕೆ ಕುರಿತು ರಾಜ್ಯದ ಜನತೆ ನಿರ್ಧಾರ ಕೈಗೊಳ್ಳುತ್ತಾರೆ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ, ಬಿಎಸ್‌ವೈಗೆ ಟಾಂಗ್ ನೀಡಿದ್ದಾರೆ. 
 
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ಎಸ್.ಯಡಿಯೂರಪ್ಪ ನಿರ್ದೋಷಿ ಎಂದು ಸಿಬಿಐ ವಿಶೇಷ ಕೋರ್ಟ್ ತೀರ್ಪು ನೀಡಿದೆ. ಅದರಲ್ಲಿ ವಿಶೇಷವಾದದ್ದು ಏನಿದೆ. ನ್ಯಾಯಾಲಯದಲ್ಲಿ ಸಿಕ್ಕಿರುವ ಜಯವನ್ನು ರಾಜಕೀಯವಾಗಿ ಬಳಸಲು ಬಿಜೆಪಿ ಮುಂದಾಗಿದೆ ಎಂದು ಕಿಡಿಕಾರಿದರು. 
 
ಮುಂದಿನ ಸಿಎಂ ನಾನೇ ಎಂದು ಬಿಎಸ್‌ವೈ ಹೇಳಬಹುದು. ಅದೇನು ಅಂಗಡಿಯಲ್ಲಿ ಸಿಗುವ ಸಾಮಾನೇ. ಇದನ್ನೆಲ್ಲ ರಾಜ್ಯದ ಜನತೆ ನಂಬಲ್ಲ. ಜನರ ಮುಂದೆ ಹೋಗೋಕೆ ಬೇರೆ ವಿಚಾರ ಇದೆ. ಇಂತಹ ವಿಷಯಗಳನ್ನು ಕಾಂಗ್ರೆಸ್‌ನವರು ಪ್ರಸ್ತಾಪಿಸಲ್ಲ. ಮುಂದೇನಾಗುತ್ತೇ ನೋಡೋಣ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಮಾರ್ಮಿಕವಾಗಿ ನುಡಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments