ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರಿಂದ ರೋಗಿಗಳ ಸುಲಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಬೇಕಾದರೆ ವೈದ್ಯರಿಗೆ ನಾವೇ 5 ಸಾವಿರ ರೂಪಾಯಿ ನೀಡುತ್ತೇವೆ. ಜನಪರ ಕೆಲಸ ಮಾಡಲಿ ಎಂದು ಉಸ್ತುವಾರಿ ಸಚಿವ ಬಸವರಾಜ್ ರಾಯರೆಡ್ಡಿ ಲೇವಡಿ ಮಾಡಿದ್ದಾರೆ.
ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉನ್ನತ ಶಿಕ್ಷಣ ಇಲಾಖೆಯಲ್ಲಿ ಬಾರಿ ಪ್ರಮಾಣದ ಭ್ರಷ್ಟಾಚಾರ ಆರೋಪ ಕೇಳಿ ಬಂದಿದೆ. ಈ ಕುರಿತು ಎರಡು ದಿನಗಳಲ್ಲಿ ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು.
ಜಿಲ್ಲಾ ಆಸ್ಪತ್ರೆಯಲ್ಲಿ ಸರಬರಾಜ ಆಗುವ ಔಷಧಿಗಳನ್ನು ರಾಜ್ಯ ಮಟ್ಟದಲ್ಲಿ ಖರೀದಿಸಲಾಗುತ್ತಿದೆ. ಸರಕಾರಿ ಆಸ್ಪತ್ರೆಗಳಲ್ಲಿ ಔಷಧಿಗಾಗಿ ವೈದ್ಯರು ರೋಗಿಗಳಿಂದ ಹಣ ಸುಲಿಗೆ ಮಾಡುತ್ತಿದ್ದಾರೆ. ಬೇಕಾದರೆ ವೈದ್ಯರಿಗೆ ನಾವೇ 5 ಸಾವಿರ ರೂಪಾಯಿ ನೀಡುತ್ತೇವೆ. ಜನಪರ ಕೆಲಸ ಮಾಡಲಿ ಎಂದು ಉಸ್ತುವಾರಿ ಸಚಿವ ಬಸವರಾಜ್ ರಾಯರೆಡ್ಡಿ ತಿಳಿಸಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.