Webdunia - Bharat's app for daily news and videos

Install App

ರೋಡ್ ಮ್ಯಾಪ್ ಬೇಕೆ ಬೇಕೆಂದು ಡಿಸಿಎಂ ಹೇಳಿದ್ಯಾಕೆ?

Webdunia
ಮಂಗಳವಾರ, 11 ಜೂನ್ 2019 (14:03 IST)
ಮುಂದಿನ ಐದು ವರ್ಷಗಳಲ್ಲಿ ರಾಜ್ಯಾದ್ಯಂತ ರಸ್ತೆ ನಿರ್ಮಾಣ ಸಂಬಂಧ "ರೋಡ್‌ ಮ್ಯಾಪ್‌" ಮಾಡಲೇಬೇಕು. ಹೀಗಂತ ಡಿಸಿಎಂ ಹೇಳಿದ್ದಾರೆ.

ರೋಡ್ ಮ್ಯಾಪ್ ಮಾಡುವುದು ಸೂಕ್ತ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಸಲಹೆ ನೀಡಿದರು.

ವಿಧನಾಸೌಧದ ಸಮ್ಮೇಳನ ಸಭಾಂಗಣದಲ್ಲಿ ಕರೆದಿದ್ದ ಲೋಕೋಯೋಗಿ ಇಲಾಖೆ ಅಧಿಕಾರಿಗಳ ಸಮ್ಮೇಳನ‌ ಸಭೆಯಲ್ಲಿ ಮಾತನಾಡಿದರು. 

 2013 ರಿಂದ 2019 ಅವಧಿಯಲ್ಲಿ ರಸ್ತೆ ನಿರ್ಮಾಣಕ್ಕಾಗಿಯೇ ಸುಮಾರು 50 ಸಾವಿರ ಕೋಟಿ ಹಣ ವೆಚ್ಚ ಮಾಡಲಾಗಿದೆ. ರಸ್ತೆ ನಿರ್ವಹಣೆ ಹೊರತು ಪಡಿಸಿ,ಇಷ್ಟು ಹಣ ವೆಚ್ಚ ಮಾಡಿದ್ದರೂ ಇನ್ನೂ ರಸ್ತೆ ನಿರ್ಮಾಣದ ಕೆಲಸವೇ ಪೂರ್ಣಗೊಂಡಿಲ್ಲ. ಇದಕ್ಕೆ ಹಣ ಹೆಚ್ಚು ಪೋಲಾಗುತ್ತಿದೆ. ಹೀಗಾಗಿ ಮುಂದಿನ ಐದು ವರ್ಷಕ್ಕೆ ರೋಡ್‌ ಮ್ಯಾಪ್‌ ಮಾಡಿಕೊಂಡು ಇಂತಿಷ್ಟು ಹಣ ನಿಗದಿ ಮಾಡುವುದು ಉತ್ತಮ ಎಂದು ಅಭಿಪ್ರಾಯ ಪಟ್ಟರು.

ಇಲಾಖೆಯಲ್ಲಿ ಯಾವುದೇ ಯೋಜನೆ ಗುತ್ತಿಗೆ ನೀಡುವ ಮೊದಲು ಯೋಜನೆ ಅಂದಾಜು ವೆಚ್ಚ ಎಸ್ಟಿಮೆಟ್‌ ಮಾಡಲಾಗುತ್ತದೆ. ಆದರೆ, ಎಸ್ಟಿಮೆಟ್‌ ಮಾಡಿದ ಮೊತ್ತಕ್ಕಿಂತಲೂ ಶೇ.40 ಕ್ಕೂ ಹೆಚ್ಚಾಗಿ ಅವೈಜ್ಞಾನಿಕವಾಗಿ ಗುತ್ತಿಗೆದಾರರು ಹಣ ವೆಚ್ಚ ಮಾಡಲಾಗುತ್ತಿದ್ದಾರೆ. ಮತ್ತೊಂದೆಡೆ ಎಸ್ಟಿಮೆಟ್‌ ಮಾಡಿದ ಮೊತ್ತಕ್ಕಿಂತಲೂ ಕಡಿಮೆ ವೆಚ್ಚಕ್ಕೆ ಯೋಜನೆಯನ್ನು ಗುತ್ತಿಗೆದಾರರು ಪೂರ್ಣಗೊಳಿಸುತ್ತಿದ್ದಾರೆ.

ಇದರಿಂದ ಗುಣಮಟ್ಟದ ಮೇಲೆ ಅನುಮಾನ ಮೂಡುವಂತೆ ಮಾಡುತ್ತಿದೆ. ಹೆಚ್ಚು ಹಾಗೂ ಕಡಿಮೆ  ಮೊತ್ತಕ್ಕೆ ಯೋಜನೆ ಪೂರ್ಣಗೊಳ್ಳುವುದಾದರೆ ಇಲಾಖೆಯಿಂದ ಎಸ್ಟಿಮೆಟ್‌ ಮಾಡುವ ಅನಿವಾರ್ಯತೆ ಯಾಕೆ? ಮುಂದಿನ‌ ದಿನದಲ್ಲಿ ಎಸ್ಟಿಮೆಟ್‌ ಆದ ಮೊತ್ತಕ್ಕೆ ಯೋಜನೆ ಪೂರ್ಣಗೊಳ್ಳುವಂತೆ ನೋಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. 



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಯೂಟ್ಯೂಬರ್‌ಗಳ ಮೇಲಿನ ಹಲ್ಲೆ ಪ್ರಕರಣದಲ್ಲಿ ಬಿಗ್‌ಟ್ವಿಸ್ಟ್‌

ಒಡಿಶಾ: 3 ಅಪ್ರಾಪ್ತರ ಮೇಲೆ ನಿರಂತರ ಅತ್ಯಾಚಾರ, ಕಾಮುಕನಿಗೆ ಕಠಿಣ ಶಿಕ್ಷೆ ವಿಧಿಸಿದ ಕೋರ್ಟ್‌

ಕ್ರಿಕೆಟಿಗ ಸಚಿನ್ ಮಗಳು ಸಾರಾಗೆ ಜಾಗತಿಕ ಮಟ್ಟದಲ್ಲಿ ಒಲಿಯಿತು ದೊಡ್ಡ ಅದೃಷ್ಟ

ನಾಯಿ ಬೊಗಳಿತೆಂದು ತೋಟಕ್ಕೆ ಹೋದ ರೈತ: ಆನೆ ದಾಳಿಯಿಂದ ಸಾವು

10 ವರ್ಷದ ಹಿಂದೆ ದೂರವಾದ ಪತ್ನಿ ಮುಗಿಸಲು ಸಾಧು ವೇಷ ಧರಿಸಿದ ಪತಿ, ಮುಂದೇ ಆಗಿದ್ದೆ ಭಯಾನಕ ಕೃತ್ಯ

ಮುಂದಿನ ಸುದ್ದಿ
Show comments