Webdunia - Bharat's app for daily news and videos

Install App

ನಗುತ್ತಲೇ ಐದು ವರ್ಷ ಕಳೆದ ಸದಾನಂದಗೌಡ ಎಂದೋರಾರು?

Webdunia
ಗುರುವಾರ, 4 ಏಪ್ರಿಲ್ 2019 (20:30 IST)
ಈ ಬಾರಿಯ ಚುನಾವಣೆ ಕೇವಲ ಬಿಜೆಪಿ-ಕಾಂಗ್ರೆಸ್ ನಡುವಿನ ಚುನಾವಣಾ ಹೋರಾಟ ಅಲ್ಲ, ದೇಶದ, ಯುವ ಸಮುದಾಯದ ಭವಿಷ್ಯ ನಿರ್ಧರಿಸುವ ಚುನಾವಣೆ ಎಂದು ಡಿಸಿಎಂ ಹೇಳಿದ್ದಾರೆ.

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಈ ಹೇಳಿಕೆ ನೀಡಿದ್ದಾರೆ.

ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ಕೃಷ್ಣ ಭೈರೇಗೌಡ ಅವರ ಪರವಾಗಿ ಕಮ್ಮಗೊಂಡನಹಳ್ಳಿಯಲ್ಲಿ ರೋಡ್‌ ಶೋನಲ್ಲಿ ಮಾತನಾಡಿದ ಅವರು, ಸೈದ್ದಾಂತಿಕವಾಗಿ ಜೆಡಿಎಸ್ ಎರಡು ಪಕ್ಷಗಳು ಒಂದೇ ರೀತಿ ಇವೆ. ಅದರಂತೆಯೇ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದೇವೆ. ಮೊದಲಿಗೆ ಉತ್ತರ ಕ್ಷೇತ್ರವನ್ನು ಎಚ್.ಡಿ ದೇವೇಗೌಡರಿಗೆ ಬಿಟ್ಟುಕೊಟ್ಟಿದ್ದೆವು. ಎಚ್.ಡಿ ದೇವೇಗೌಡರು ತುಮಕೂರು ಬಯಸಿದ್ದರಿಂದ ಇಲ್ಲಿಗೆ ಕೃಷ್ಣ ಭೈರೇಗೌಡರನ್ನು ಇಲ್ಲಿನ ಅಭ್ಯರ್ಥಿ ಮಾಡಿದೆವು. ಇಲ್ಲಿಂದ ಗೆದ್ದು ಹೋದ ಡಿ.ವಿ ಸದಾನಂದಗೌಡರು ಯಾವುದೇ ಕೆಲಸ ಮಾಡಲಿಲ್ಲ. ಬದಲಿಗೆ ಡಿವಿಎಸ್ ನಗುತ್ತಲೇ ಇಡೀ ಐದು ವರ್ಷ ಕಾಲ ಕಳೆದರು.

ಇದೀಗ ನಿಮ್ಮ ಕೆಲಸ ಮಾಡಿಕೊಡಬಲ್ಲ ದಕ್ಷ ಅಭ್ಯರ್ಥಿ ಕೊಟ್ಟಿದ್ದೇವೆ. ಶಾಸಕನಾಗಿ, ಸಂಸದನಾಗಿ ಸಾಕಷ್ಟು ಅನುಭವ ಹೊಂದಿದ್ದಾರೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಐದು ವರ್ಷಗಳಲ್ಲಿ ಬರೀ ಮಾತಿನ ಮೋಡಿ ಅಷ್ಟೇ ಪ್ರದರ್ಶಿಸಿದರು. ಪ್ರಪಂಚದಲ್ಲಿ ಅತ್ಯಂತ ಸುಳ್ಳು ಹೇಳುವ ಪ್ರಧಾನಿ ಇದ್ದರೆ ಅದು ನರೇಂದ್ರ ಮೋದಿ ಮಾತ್ರ ಎಂದರು.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments