ನಗುತ್ತಲೇ ಐದು ವರ್ಷ ಕಳೆದ ಸದಾನಂದಗೌಡ ಎಂದೋರಾರು?

Webdunia
ಗುರುವಾರ, 4 ಏಪ್ರಿಲ್ 2019 (20:30 IST)
ಈ ಬಾರಿಯ ಚುನಾವಣೆ ಕೇವಲ ಬಿಜೆಪಿ-ಕಾಂಗ್ರೆಸ್ ನಡುವಿನ ಚುನಾವಣಾ ಹೋರಾಟ ಅಲ್ಲ, ದೇಶದ, ಯುವ ಸಮುದಾಯದ ಭವಿಷ್ಯ ನಿರ್ಧರಿಸುವ ಚುನಾವಣೆ ಎಂದು ಡಿಸಿಎಂ ಹೇಳಿದ್ದಾರೆ.

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಈ ಹೇಳಿಕೆ ನೀಡಿದ್ದಾರೆ.

ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ಕೃಷ್ಣ ಭೈರೇಗೌಡ ಅವರ ಪರವಾಗಿ ಕಮ್ಮಗೊಂಡನಹಳ್ಳಿಯಲ್ಲಿ ರೋಡ್‌ ಶೋನಲ್ಲಿ ಮಾತನಾಡಿದ ಅವರು, ಸೈದ್ದಾಂತಿಕವಾಗಿ ಜೆಡಿಎಸ್ ಎರಡು ಪಕ್ಷಗಳು ಒಂದೇ ರೀತಿ ಇವೆ. ಅದರಂತೆಯೇ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದೇವೆ. ಮೊದಲಿಗೆ ಉತ್ತರ ಕ್ಷೇತ್ರವನ್ನು ಎಚ್.ಡಿ ದೇವೇಗೌಡರಿಗೆ ಬಿಟ್ಟುಕೊಟ್ಟಿದ್ದೆವು. ಎಚ್.ಡಿ ದೇವೇಗೌಡರು ತುಮಕೂರು ಬಯಸಿದ್ದರಿಂದ ಇಲ್ಲಿಗೆ ಕೃಷ್ಣ ಭೈರೇಗೌಡರನ್ನು ಇಲ್ಲಿನ ಅಭ್ಯರ್ಥಿ ಮಾಡಿದೆವು. ಇಲ್ಲಿಂದ ಗೆದ್ದು ಹೋದ ಡಿ.ವಿ ಸದಾನಂದಗೌಡರು ಯಾವುದೇ ಕೆಲಸ ಮಾಡಲಿಲ್ಲ. ಬದಲಿಗೆ ಡಿವಿಎಸ್ ನಗುತ್ತಲೇ ಇಡೀ ಐದು ವರ್ಷ ಕಾಲ ಕಳೆದರು.

ಇದೀಗ ನಿಮ್ಮ ಕೆಲಸ ಮಾಡಿಕೊಡಬಲ್ಲ ದಕ್ಷ ಅಭ್ಯರ್ಥಿ ಕೊಟ್ಟಿದ್ದೇವೆ. ಶಾಸಕನಾಗಿ, ಸಂಸದನಾಗಿ ಸಾಕಷ್ಟು ಅನುಭವ ಹೊಂದಿದ್ದಾರೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಐದು ವರ್ಷಗಳಲ್ಲಿ ಬರೀ ಮಾತಿನ ಮೋಡಿ ಅಷ್ಟೇ ಪ್ರದರ್ಶಿಸಿದರು. ಪ್ರಪಂಚದಲ್ಲಿ ಅತ್ಯಂತ ಸುಳ್ಳು ಹೇಳುವ ಪ್ರಧಾನಿ ಇದ್ದರೆ ಅದು ನರೇಂದ್ರ ಮೋದಿ ಮಾತ್ರ ಎಂದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ಎಸ್‌ ನೋಂದಣಿ ವಿವಾದ ಮಹತ್ವದ ನಿರ್ಧಾರ ಕೈಗೊಂಡ ನಾಯಕರು, ಇಲ್ಲಿದೆ ಮಾಹಿತಿ

ಗಾಂಜಾ ಮಾರಾಟಕ್ಕೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಅಜ್ಜಿಯನ್ನೇ ಕೊಂದ ಮೊಮ್ಮಗ

ಹಿಂದೂಗಳ ನಂಬಿಕೆಯೊಂದಿಗೆ ಆಟವಾಡಲು ನಾವು ಯಾರಿಗೂ ಅವಕಾಶ ನೀಡುವುದಿಲ್ಲ

ಪುಟ್ಟ ಕಂದಮ್ಮಗಳನ್ನು ಡೇಕೇರ್‌ ಸೆಂಟರ್‌ನಲ್ಲಿ ಬಿಡುವ ಮುನ್ನಾ ಹುಷಾರ್‌, ಬೆಂಗಳೂರಿನಲ್ಲಿದ್ದು ಎನ್ನಲಾದ ಈ ಘಟನೆ ಕರುಳು ಹಿಂಡುತ್ತದೆ

Karnataka Weather: ಜು 2ರಂದು ದ.ಕನ್ನಡ ಪ್ರಾಥಮಿಕ, ಪ್ರೌಢ ಶಾಲೆಗಳಿಗ ರಜೆ, ಯಾಕೆ ಗೊತ್ತಾ

ಮುಂದಿನ ಸುದ್ದಿ
Show comments