ತಂದೆಗೆ ಮಾಡಿದ ಮಾಂಸವನ್ನು ತಿಂದ ನಾಯಿ ಮಗಳನ್ನು ಕೊಂದ ತಂದೆ

Webdunia
ಬುಧವಾರ, 21 ಸೆಪ್ಟಂಬರ್ 2022 (14:06 IST)
ಕುರಿ ಮಾಂಸವನ್ನು ನಾಯಿ ತಿಂದ ವಿಚಾರವಾಗಿ ನಡೆದ ಗಲಾಟೆಯಲ್ಲಿ ತಂದೆಯೊಬ್ಬ ತನ್ನ ಮಗಳನ್ನು ಕೊಂದಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ಒಸ್ಮಾನಾಬಾದ್ ಜಿಲ್ಲೆಯ ತುಳಜಾಪುರ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.
ಕಾಜಲ್ ಶಿಂಧೆ ಎಂಬಾಕೆಯೇ ತಂದೆಯಿಂದ ಕೊಲೆಯಾದ ಪುತ್ರಿ. ಗಣೇಶ್ ಭೋಸ್ಲೆ ಎಂಬಾತನೇ ಪುತ್ರಿಯ ಕೊಂದ ತಂದೆ.
 
ಭಾನುವಾರ ಸಂಜೆ ಕಾಜಲ್ ಶಿಂಧೆ ರಾತ್ರಿ ಊಟಕ್ಕೆ ಎಂದು ಮಟನ್ ಬೇಯಿಸಿದ್ದರು. ಆದರೆ, ಇದಾದ ನಂತರ ಮನೆಯಲ್ಲಿ ಬೇರೆ ಕೆಲಸ ಮಾಡುತ್ತಿದ್ದಳು. ಅದೇ ಸಮಯದಲ್ಲಿ ನಾಯಿಯೊಂದು ಬೇಯಿಸಿದ್ದ ಮಾಂಸ ತಿಂದಿದೆ. ಇದನ್ನು ಕಾಜಲ್ ತಾಯಿ ಮೀರಾ ನೋಡಿದ್ದಾರೆ. ಆಗ ಇದರಿಂದ ಮನೆಯಿಂದ ಜಗಳ ಶುರುವಾಗಿದೆ.
 
ಇದೇ ವೇಳೆ ಕುಡಿದ ಅಮಲಿನಲ್ಲಿದ್ದ ಕಾಜಲ್ ತಂದೆ ಗಣೇಶ್ ಭೋಸ್ಲೆ ಕೋಪದಲ್ಲಿ ಗನ್​ನಿಂದ ಮಗಳು ಕಾಜಲ್ ಮೇಲೆ ಗುಂಡು ಹಾರಿಸಿದ್ದಾರೆ. ತಂದೆ ಹಾರಿಸಿದ ಗುಂಡು ಎದೆಗೆ ತಗುಲಿ ಕಾಜಲ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಆಗ ಕಾಜಲ್ ಅವರನ್ನು ಕುಟುಂಬಸ್ಥರು ಜಿಲ್ಲಾಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದಾಗ್ಯೂ, ವೈದ್ಯರು ಆಕೆ ಮೃತಪಟ್ಟಿರುವುದಾಗಿ ಎಂದು ಘೋಷಿಸಿದ್ದಾರೆ.
 
ಈ ಸಂಬಂಧ ಕಾಜಲ್ ಪತಿ ಮನೋಜ್ ಸುನೀಲ್ ಶಿಂಧೆ ನಲದುರ್ಗ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ದೂರಿನ ನಂತರ ತಂದೆ ಗಣೇಶ್ ಬೋಸ್ಲೆ ಮತ್ತು ತಾಯಿ ಮೀರಾ ಬೋಸ್ಲೆ ವಿರುದ್ಧ ಪ್ರಕರಣ ದಾಖಲಾಗಿದೆ. ಇನ್ನು ಘಟನೆಯ ನಂತರ ಆರೋಪಿ ಗಣೇಶ ಭೋಸಲೆ ತಲೆ ಮರೆಸಿಕೊಂಡಿದ್ದು, ತಾಯಿ ಮೀರಾ ಭೋಸ್ಲೆ ಅವರನ್ನು ಬಂಧಿಸಲಾಗಿದೆ. ಈ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ನಾಗರಿಕ ಅಲ್ಲದಿದ್ದರೂ ಆಧಾರ್ ಕಾರ್ಡ್ ಇದೆ ಎಂದು ಮತದಾನ ಅವಕಾಶ ನೀಡಬೇಕೇ: ಸುಪ್ರೀಂಕೋರ್ಟ್ ತಪರಾಕಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಅಧಿಕಾರ ಹಂಚಿಕೆ ಬಗ್ಗೆ ಕೊನೆಗೂ ಮಹತ್ವದ ಅಪ್ ಡೇಟ್ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

20 ರೂ ಇದ್ದ ಟೊಮೆಟೊ ದರ ದಿಡೀರ್ ಏರಿಕೆ: ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments