Webdunia - Bharat's app for daily news and videos

Install App

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಶ್ವಾನಗಳ ಕಾವಲು

Webdunia
ಭಾನುವಾರ, 15 ಮೇ 2022 (15:25 IST)
ಹುಬ್ಬಳ್ಳಿ: ಜನಪ್ರೀಯ ರಾಷ್ಟ್ರೀಯ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ವಾಣಿಜ್ಯನಗರಿ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಭದ್ರತಾ ಶಕ್ತಿಯನ್ನು ಹೆಚ್ಚಿಸುವ ಸಲುವಾಗಿ ಗುರು ಹಾಗೂ ಮಾಯಾ ಎನ್ನುವ ಹೆಸರಿನ ಎರಡು ಬೆಲ್ಜಿಯಂ ಶಫರ್ಡ್ ಶ್ವಾನಗಳು ಸೇರ್ಪಡೆ ಮಾಡಲಾಗಿದೆ.
 
ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆಯು ಒಂದು ವರ್ಷದ ಬೆಲ್ಜಿಯಂ ಶೆಫರ್ಡ್ ನಾಯಿಗಳನ್ನು ತನ್ನ ಭದ್ರತಾ ತಂಡಕ್ಕೆ ಸೇರಿಸಿಕೊಂಡಿದೆ. ಇದರಿಂದಾಗಿ ವಿಮಾನ ನಿಲ್ದಾಣದ ಭದ್ರತಾ ವಿಭಾಗದ ಬಲ ಹೆಚ್ಚಿದಂತಾಗಿದೆ. ಬೆಂಗಳೂರಿನಲ್ಲಿ ಸಿಆರ್‌ಪಿಎಫ್ ಶ್ವಾನ ತಳಿ ಮತ್ತು ತರಬೇತಿ ಶಾಲೆಯಲ್ಲಿ ಏಳು ತಿಂಗಳು ಈ ಶ್ವಾನಗಳಿಗೆ ತರಬೇತಿ ನೀಡಲಾಗಿದೆ. ಈ ತಳಿಯ ನಾಯಿಗಳು ಸ್ಫೋಟಕಗಳು ಮತ್ತು ಮಾದಕವಸ್ತುಗಳನ್ನು ವೇಗವಾಗಿ ಪತ್ತೆಹಚ್ಚಲು ವಿಶೇಷವಾಗಿ ತರಬೇತಿ ಪಡೆದಿರುತ್ತವೆ.
 
'ಗುರು' ಶ್ವಾನಕ್ಕೆ ಮಾದಕ ದ್ರವ್ಯಗಳನ್ನು ಪತ್ತೆ ಮಾಡಲು ತರಬೇತಿ ನೀಡಲಾಗಿದ್ದು 'ಮಾಯಾ'ಗೆ ಸ್ಫೋಟಕಗಳನ್ನು ಪತ್ತೆಹಚ್ಚಲು ಹೇಳಿದ ಪರೀಕ್ಷೆಯಲ್ಲಿ ಪಾಸ್‌ ಆಗಿದ್ದು, ವಿಮಾನಗಳಲ್ಲಿ ಸ್ಫೋಟಕಗಳು, ಮಾದಕ ದ್ರವ್ಯಗಳನ್ನು ಪತ್ತೆಹಚ್ಚಲು ಮತ್ತು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಾಮಗ್ರಿಗಳಲ್ಲಿ ಅಪಾಯಕಾರಿ ವಸ್ತುಗಳಿದ್ದರೆ ಗುರುತಿಸಲು ಶ್ವಾನಗಳನ್ನು ಬಳಸಲಾಗುತ್ತದೆ.
 
ಅಷ್ಟೇ ಅಲ್ಲದೇ ಸುರಕ್ಷಿತ ಪ್ರಯಾಣದ ಭರವಸೆ ಮೂಡಿಸುವುದು ವಿಮಾನ ನಿಲ್ದಾಣದ ಪ್ರಾಧಿಕಾರದ ಉದ್ದೇಶ್ ಈ ಕಾರಣಕ್ಕೆ ಹುಬ್ಬಳ್ಳಿಯ ವಿಮಾನ ನಿಲ್ದಾಣದ ಭದ್ರತೆ ಶ್ವಾನಗಳನ್ನು ಸೇರ್ಪಡೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೀಡಂ ಪಾರ್ಕ್‌ನ ಕಾಂಪೌಂಡ್ ನೆಲಸಮದಿಂದ ಪರಿಸರಕ್ಕೆ ಹಾನಿ: ಬಿಜೆಪಿ ದೂರು

ಮುಂಬೈ– ಪುಣೆ ಪ್ರಯಾಣಿಕರ ಜತೆ ಗುಡ್‌ನ್ಯೂಸ್ ಹಂಚಿಕೊಂಡ ನಿತಿನ್ ಗಡ್ಕರಿ

ಉತ್ತರಕಾಶಿ ಮೇಘಸ್ಫೋಟ: ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ–ಕಾಲೇಜಿಗೆ ರಜೆ ಘೋಷಣೆ

ಧರ್ಮಸ್ಥಳ, ಎಲ್ಲರ ಚಿತ್ತ ನಾಳೆಯ ಕೊನೆಯ ಪಾಯಿಂಟ್‌ನತ್ತ, ಇಂದಿನ ಶೋಧದಲ್ಲಿ ಬಿಗ್‌ಟ್ವಿಸ್ಟ್‌

ಉತ್ತರಕಾಶಿಯ ರಣಭೀಕರ ಮೇಘಸ್ಫೋಟ: ಮಿಡಿದ ಮೋದಿಯಿಂದ, ರಕ್ಷಣಾ ನೆರವು ಘೋಷಣೆ

ಮುಂದಿನ ಸುದ್ದಿ